ಕಡುಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

KannadaprabhaNewsNetwork |  
Published : Aug 05, 2026, 02:15 AM IST
ಫೋಟೋವಿವರ- (4ಎಚ್‌ಪಿಟಿ4)  ಹೊಸೇಟೆ ತಾಲೂಕಿನ ವ್ಯಾಪ್ತಿಯಲ್ಲಿರುವ ಕಡುಬಡವರಿಗೆ ಸರ್ಕಾರದಿಂದ ನಿವೇಶನ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಶ್ರೀ ನಿಂಗರಾಜ್‌ ಗೌಡ್ರು ಬಣದ ಜಿಲ್ಲಾ ಸಮಿತಿಯಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು | Kannada Prabha

ಸಾರಾಂಶ

ಕಡುಬಡವರಿಗೆ ಸರ್ಕಾರದಿಂದ ನಿವೇಶನ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಶ್ರೀ ನಿಂಗರಾಜ್‌ ಗೌಡ್ರು ಬಣದ ಜಿಲ್ಲಾ ಸಮಿತಿಯಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಹೊಸಪೇಟೆ: ತಾಲೂಕಿನ ವ್ಯಾಪ್ತಿಯಲ್ಲಿರುವ ಕಡುಬಡವರಿಗೆ ಸರ್ಕಾರದಿಂದ ನಿವೇಶನ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಶ್ರೀ ನಿಂಗರಾಜ್‌ ಗೌಡ್ರು ಬಣದ ಜಿಲ್ಲಾ ಸಮಿತಿಯಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಶ್ರೀ ನಿಂಗರಾಜ್‌ ಗೌಡ್ರು ಬಣದ ಜಿಲ್ಲಾಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ ಮಾತನಾಡಿ, ಹೊಸಪೇಟೆ ತಾಲೂಕಿನ ಕಡುಬಡವರಿಗೆ ಸರ್ಕಾರದಿಂದ ಆನ್ ಲೈನ್ ಅರ್ಜಿ ಆಹ್ವಾನಿಸಿದ್ದು, ಕಳೆದ ಒಂದು ವರ್ಷದ ಹಿಂದೆ ಸುಮಾರು ಅರ್ಜಿಗಳನ್ನು ಬಡ ಜನರು ಹಾಕಿದ್ದಾರೆ. ಇಲ್ಲಿ ವರೆಗೂ ಶಾಸಕರಾಗಲಿ, ತಹಸೀಲ್ದಾರರಾಗಲಿ ಹಾಗೂ ಜಿಲ್ಲಾಧಿಕಾರಿಗಳಾಗಲಿ ಬಡವರಿಗೆ ನಿವೇಶನ ಹಂಚಿಕೆ ಮಾಡುವ ಕುರಿತು ಧ್ವನಿ ಎತ್ತುತ್ತಿಲ್ಲ. ತಕ್ಷಣವೇ ಶಾಸಕರ ಒಳಗೊಂಡ ಸಮಿತಿ ರಚಿಸಿ ಬಡವರಿಗೆ ನಿವೇಶನ ಹಂಚುವ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ತಾಲೂಕಿನಲ್ಲಿ ಸರ್ಕಾರಿ ನಿವೇಶನ ಸಾಕಷ್ಟಿದ್ದು, ಸರ್ಕಾರಿ ಜಮೀನುಗಳನ್ನು ಸಂರಕ್ಷಣೆ ಮಾಡಲು ಕಂದಾಯ ಇಲಾಖೆ ಮತ್ತು ನಗರಸಭೆ ವಿಫಲವಾಗಿವೆ. ಈ ಕುರಿತು ಅನೇಕ ವರ್ಷಗಳಿಂದ ಕರವೇ ಸಂಘಟನೆಯಿಂದ ಹೇಳುತ್ತ ಬರಲಾಗಿದ್ದರೂ ಇದುವರೆಗೂ ಪ್ರಯೋಜನವಾಗಿಲ್ಲ. ಸರ್ಕಾರಿ ಜಮೀನನ್ನು ನಕಲಿ ಮಾಲೀಕತ್ವವನ್ನು ಸೃಷ್ಟಿ ಮಾಡುತ್ತಿರುವ ಬಗ್ಗೆ ಮಾಹಿತಿ ಕೇಳಿ ಬರುತ್ತಿದ್ದು, ತಕ್ಷಣವೇ ಸರ್ಕಾರಿ ಜಮೀನನ್ನು ಪರಿಶೀಲಿಸಿ ಬಡವರಿಗೆ ನಿವೇಶನ ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಎಸ್‌. ಎಂ. ಜಾಫರ್‌, ಎನ್.ಎಚ್‌. ಶ್ರೀನಿವಾಸ, ಈಡಿಗರ ರಮೇಶ್‌, ಪ್ರಶಾಂತ್‌ ನಾಯಕ, ಸಲೀಂ, ನಿಸಾರ್‌, ರಾಮಕೃಷ್ಣ, ರಾಘವೇಂದ್ರರಾವ್‌, ರಾಘುರಾಮ್‌ ನಾಯಕ, ಸುವರ್ಣ ರತ್ನ, ಬಾನುಬಿ, ಶಮಾ, ನಾಗವೇಣಿ, ಸುಮಾ, ರಶೀದ, ದುರುಗಮ್ಮ, ಸುಂಕಮ್ಮ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಜಾರಿಗಾಗಿ ಪ್ರತಿಭಟನೆ
ಬದಲಾಗುತ್ತಿರುವ ಜೀವನಶೈಲಿಯಿಂದ ಮೆದುಳಿನ ಆರೋಗ್ಯಕ್ಕೆ ಕಂಠಕ: ಡಾ. ಟಿ. ಲಿಂಗರಾಜು