ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Sep 16, 2026, 01:45 AM IST
ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು. | Kannada Prabha

ಸಾರಾಂಶ

Protest demanding immediate release of water into Bhadra canals

-ಜಲಸಂಪನ್ಮೂಲ ಸಚಿವರಿಗೆ ಪತ್ರ । 2-3 ದಿನಗಳಲ್ಲಿ ಕಾಡಾ ಸಭೆ: ಶಾಸಕ ಸಂಗಮೇಶ್ವರ್ ಕನ್ನಡಪ್ರಭ ವಾರ್ತೆ ಭದ್ರಾವತಿ

ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು.

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗೂ ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಇದ್ದರು.

ಫೋಟೊ

ಡಿ೧೫-ಬಿಡಿವಿಟಿ ಮತ್ತು (ಎ)

ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಡು ರಸ್ತೆಯಲ್ಲೇ ಗಣೇಶಮೂರ್ತಿ ಇಟ್ಟು ಯುವಕರ ಪ್ರತಿಭಟನೆ
ವಿಜೃಂಭಣೆಯಿಂದ ನಡೆದ 46ನೇ ವರ್ಷದ ಗಣಪತಿ ಪೂಜಾ ಮಹೋತ್ಸವ