ಕನ್ನಡಪ್ರಭ ವಾರ್ತೆ ಚಿತ್ರದುರ್ಗ:
ಎದುರು ಬುಧವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಒಳ ಮೀಸಲಾತಿ ಜಾರಿಗೊಳಿಸುವಲ್ಲಿ ವಿಳಂಭ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಪ್ಪ, ಒಳ ಮೀಸಲಾತಿ ಜಾರಿಗಾಗಿ ಮೂರ್ನಾಲ್ಕು ದಶಕಗಳಿಂದ ಮಾದಿಗ ಸಮುದಾಯಗಳು ನಡೆಸಿದ ಹೋರಾಟದ ಫಲವಾಗಿ ಕಳೆದ ಆ.1 ರಂದು ಸುಪ್ರೀಂ ಕೋರ್ಟ್ ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎನ್ನುವ ಮಹತ್ತರ ತೀರ್ಪು ನೀಡಿದ್ದರೂ ಸಹ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ದತ್ತಾಂಶಗಳ ನೆಪ ಹೇಳಿಕೊಂಡು ಕಾಲಹರಣ ಮಾಡುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಸಿದರು.
ಪರವಾಗಿಲ್ಲ. ರಾಜಕಾರಣಿಗಳ ನಿಜ ಬಣ್ಣ ಈಗ ಬಯಲಾಗುತ್ತಿದೆ. ಇನ್ನು ನಾವುಗಳು ಭರವಸೆಯಿಟ್ಟುಕೊಂಡು ಸುಮ್ಮನೆ
ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸಿಎಂ ಸಿದ್ದರಾಮಯ್ಯ ಒಳ ಮೀಸಲಾತಿ ಜಾರಿಗೆ ತರಬೇಕು. ಇಲ್ಲಿಯವರೆಗೂ ಆಳಿದ ಎಲ್ಲಾ ಸರ್ಕಾರಗಳು ಮಾದಿಗ ಸಮುದಾಯವನ್ನು ವಂಚಿಸಿಕೊಂಡು ಬರುತ್ತಿವೆ. ತಕ್ಷಣವೆ ರಾಜ್ಯ ಸರ್ಕಾರ ಒಳ ಮೀಸಲಾತಿ ಅನುಷ್ಟಾನಕ್ಕೆ ತರಬೇಕು. ಇಲ್ಲದಿದ್ದರೆ ಕುರ್ಚಿ ಖಾಲಿ ಮಾಡುವತನಕ ನಮ್ಮ ಹೋರಾಟ ನಿಲ್ಲುವುದಿಲ್ಲ. ಮುಂದೆ ಸಿಎಂ ಮನೆಗೆ ಮುತ್ತಿಗೆ ಹಾಕಲು ಎಲ್ಲಾ ಮಾದಿಗ ಸಮುದಾಯದ ಸಂಘಟನೆಗಳು ಸಿದ್ಧವಾಗಿವೆ ಎಂದರು.
ಜಾತಿಯಲ್ಲಿನ 101 ಉಪ ಜಾತಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಗೆ ಹೂವು ಮುಡಿಸುವ ಕೆಲಸ ಮಾಡುವುದನ್ನು ಬಿಟ್ಟು ತಕ್ಷಣದಿಂದಲೆ ಒಳ ಮೀಸಲಾತಿಯನ್ನು ಜಾರಿಗೆ ತರಬೇಕು.
ಮಾದಿಗ ಸಮುದಾಯಗಳ ಸ್ವಾಭಿಮಾನ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಸುಂದರೇಶ್, ಕೆ.ಎನ್.ದೊಡ್ಡೊಟ್ಟೆಪ್ಪ, ಲಕ್ಷ್ಮಮ್ಮ, ನವೀದ್,