ಜಸ್ಟಿಸ್ ಎಚ್.ಎನ್. ನಾಗಮೋಹನದಾಸ ಆಯೋಗದ ವರದಿಯ ಪ್ರಕಾರ ೨೫-೦೮-೨೦೨೫ರ ಆದೇಶದಂತೆ ೫೬,೪೩೨ ಹುದ್ದೆಗಳನ್ನು ತುಂಬುವಾಗ ಒಳಮೀಸಲಾತಿ ಜಾರಿ ಮಾಡುವಂತೆ ಆಗ್ರಹಿಸಿ ಮಾದಿಗ ಮತ್ತು ಉಪಜಾತಿಗಳ ಒಕ್ಕೂಟಗಳ ಘಟಕ ಲೋಕಾಪುರ ವತಿಯಿಂದ ಲೋಕಾಪುರ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗೆ ಸೊಮವಾರ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಲೋಕಾಪುರ
ಜಸ್ಟಿಸ್ ಎಚ್.ಎನ್. ನಾಗಮೋಹನದಾಸ ಆಯೋಗದ ವರದಿಯ ಪ್ರಕಾರ ೨೫-೦೮-೨೦೨೫ರ ಆದೇಶದಂತೆ ೫೬,೪೩೨ ಹುದ್ದೆಗಳನ್ನು ತುಂಬುವಾಗ ಒಳಮೀಸಲಾತಿ ಜಾರಿ ಮಾಡುವಂತೆ ಆಗ್ರಹಿಸಿ ಮಾದಿಗ ಮತ್ತು ಉಪಜಾತಿಗಳ ಒಕ್ಕೂಟಗಳ ಘಟಕ ಲೋಕಾಪುರ ವತಿಯಿಂದ ಲೋಕಾಪುರ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗೆ ಸೊಮವಾರ ಮನವಿ ಸಲ್ಲಿಸಲಾಯಿತು.
ಮಾದಿಗ ಸಮಾಜದ ಮುಖಂಡ ವೈ.ಸಿ.ಕಾಂಬಳೆ ಮಾತನಾಡಿ, ಪರಿಶಿಷ್ಟ ಜಾತಿ ಜನಾಂಗಕ್ಕೆ ಒಳಮೀಸಲಾತಿ ಜಾರಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಕೊಟ್ಟು ಸರ್ವೋಚ್ಚ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಸರಕಾರ ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗ ವರದಿ ನೀಡಿ ೧೨-೧೧-೨೦೨೪ರಂದು ಸಚಿವ ಅಂಗೀಕರಿಸಿ ಸಂಪುಟ ನಿರ್ಣಯ ಕೈಗೊಂಡಿತು. ೩೫-೪೦ ವರ್ಷದಿಂದ ನಿರಂತರ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿತು ಎಂದು ನಿಟ್ಟುಸಿ ಬಿಡುವಾಗಲೇ ಈಚೆಗೆ ಯಾವುದೋ ನೆಪ ನೀಡಿ ಒಳಮೀಸಲಾತಿ ರದ್ದು ಮಾಡಿ ಹಳೆ ಮೀಸಲಾತಿಯಂತೆ ರಾಜ್ಯ ಸರಕಾರ ೫೬,೪೩೨ ಹುದ್ದೆ ತುಂಬಲು ಆದೇಶ ಹೊರಡಿಸಿರುವುದು ಮಾದಿಗರ ಮರಣ ಶಾಸನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಮಾಜದ ಯುವ ಮುಖಂಡ ಕುಮಾರ ಕಾಳಮ್ಮನವರ ಮಾತನಾಡಿ, ಸಾಮಾಜಿಕ ನ್ಯಾಯ ಸಮಸಮಾಜ ನಿರ್ಮಾಣಕ್ಕಾಗಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಪ್ರಕಾರ ವಂಚಿತ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದರು.
ಸಮಾಜದ ಯುವ ಮುಖಂಡ ಸುರೇಶ ಹುಗ್ಗಿ ಮಾತನಾಡಿ, ಖಾಲಿ ಇರುವ ಹುದ್ದೆಗಳನ್ನು ತುಂಬುವ ನೆಪ ಮಾಡಿ ಯಾರದೋ ಒತ್ತಡಕ್ಕೆ ಮಣಿದು ಒಳಮೀಸಲಾತಿ ಜಾರಿಮಾಡದೇ ೫೬೪೩೨ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಲು ಜಂಟಿ ಸದನದಲ್ಲಿ ಸರಕಾರ ಅಂಗೀಕಾರ ಮಾಡಿರುವುದು ಸಮುದಾಯಕ್ಕೆ ಮಾಡಿದ ಮಹಾದ್ರೋಹ ಎಂದು ದೂರಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.