18ರಂದು ನೀರಾವರಿಗೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Dec 17, 2024, 12:45 AM IST
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿ  | Kannada Prabha

ಸಾರಾಂಶ

ಕುಣಿಗಲ್ : ತಾಲೂಕಿಗೆ ಶಾಶ್ವತ ನೀರಾವರಿ ಯೋಜನೆಗಾಗಿ ಆಗ್ರಹಿಸಿ ಡಿ.18ರಂದು ಬುಧವಾರ ರೈತರೊಂದಿಗೆ ಪಕ್ಷಾತೀತವಾಗಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಬಾಂಬೆ ಶಿವಣ್ಣ ಎಚ್ಚರಿಕೆ ನೀಡಿದ್ದಾರೆ.

ಕುಣಿಗಲ್ : ತಾಲೂಕಿಗೆ ಶಾಶ್ವತ ನೀರಾವರಿ ಯೋಜನೆಗಾಗಿ ಆಗ್ರಹಿಸಿ ಡಿ.18ರಂದು ಬುಧವಾರ ರೈತರೊಂದಿಗೆ ಪಕ್ಷಾತೀತವಾಗಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಬಾಂಬೆ ಶಿವಣ್ಣ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಶ್ವತ ನೀರಾವರಿ ಯೋಜನೆ ಇಲ್ಲದೆ ವಂಚಿತವಾಗಿ ರೈತರು ಕಷ್ಟ ಅನುಭವಿಸುತ್ತಿದ್ದಾರೆ. ಕಿತ್ತನಾ ಮಂಗಲ, ಸಂತೆಮಾವತ್ತೂರು, ಟಿ.ಹೊಸಹಳ್ಳಿ ಪಂಚಾಯಿತಿ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸದೆ ನೀರನ್ನು ಮಾಗಡಿಗೆ ಕೊಂಡೊಯ್ಯುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕುಣಿಗಲ್ ತಾಲೂಕಿನ ಪಾಲಿನ 3.3 ಟಿಎಂಸಿ ನೀರನ್ನು ಇಲ್ಲಿನ ಎಲ್ಲಾ ಕೆರೆಗಳಿಗೆ ತುಂಬಿಸಲು ಯೋಚನೆ ಮಾಡದೆ ಮಾಗಡಿಗೆ ನೀರನ್ನು ಕೊಂಡೊಯುತ್ತಿರುವ ಹುನ್ನಾರ ಮಾಡಲಾಗುತ್ತಿದೆ.ನೀರು ಹರಿದರೆ ಅಂತರ್ಜಲ ವೃದ್ಧಿಯಾಗುತ್ತದೆ ಮೊದಲು ರೈತರಿಗೆ ನೀರು, ಊಟ ನೀಡಿ ನಂತರ ನಿಮ್ಮ ಗ್ಯಾರಂಟಿಗಳನ್ನು ನೀಡಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು . ಡಿ.18 ರಂದು ಬೆಳಿಗ್ಗೆ 11ಗಂಟೆಗೆ ಬುಧವಾರ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿವರೆಗೆ ರೈತರೊಂದಿಗೆ ಪಕ್ಷಾತೀತವಾಗಿ ನಡೆಯುವ ಹೋರಾಟದಲ್ಲಿ ಭಾಗವಹಿಸುವಂತೆ ಕರೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ