- ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಲು ಒತ್ತಾಯ
- - -ಕನ್ನಡಪ್ರಭ ವಾರ್ತೆ, ದಾವಣಗೆರೆ ವಕ್ಫ್ ಕಾಯ್ದೆ ವಿರೋಧಿಸಿ ದಂಗೆ ಏಳುವಂತೆ ಪ್ರಚೋದನಾಕಾರಿ ಹೇಳಿಕೆ ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹರಿಯಬಿಟ್ಟಿದ್ದ ಪಾಲಿಕೆ ಮಾಜಿ ಸದಸ್ಯ ಕಬೀರ್ ಖಾನ್ ಮತ್ತು ಇತರರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ, ರಾಜ್ಯದಿಂದಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ಏ.24ರಂದು ವಿಶ್ವ ಹಿಂದು ಪರಿಷತ್ತು ಜಿಲ್ಲಾ ಕಾರ್ಯದರ್ಶಿ ಸಿ.ಎಸ್.ರಾಜು ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 11 ಗಂಟೆಗೆ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವೀರ ಮದಕರಿ ನಾಯಕ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹೊರತು, ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಅರ್ಪಿಸಲಾಗುವುದು ಎಂದರು.ಹಿಂದೂಪರ ಸಂಘಟನೆ ಸದಸ್ಯರು ಸೇರಿದಂತೆ ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಸೇರಲಿದ್ದಾರೆ. ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಅರ್ಪಿಸಲಾಗುವುದು ಎಂದರು.
ಕೇಂದ್ರ ಸರ್ಕಾರದ ವಕ್ಫ್ ಕಾಯ್ದೆ ಹಿಂದಕ್ಕೆ ಪಡೆಯಲು ಬರೀ ಮನವಿ ಸಲ್ಲಿಸುವುದರಿಂದ ಏನೂ ಆಗೋದಿಲ್ಲ. ಬಸ್, ರೈಲು ಸುಡಬೇಕು, ಹುತಾತ್ಮರಾಗಬೇಕೆಂಬ ಪ್ರಚೋದನಾಕಾರಿ ಹೇಳಿಕೆ ವೀಡಿಯೋವನ್ನು ಕಬೀರ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಪೊಲೀಸರು ಕಬೀರ್ ಖಾನ್ನನ್ನು ಬಂಧಿಸಿದ್ದಾರೆ. ಆದರೆ, ಸ್ಟೇಷನ್ ಬೇಲ್ ಸಿಗುವಂತಹ ಸೆಕ್ಷನ್ ಹಾಕಿದ್ದು, ಕಬೀರ್ ಖಾನ್ ಹೇಳಿಕೆ ಜಿಲ್ಲಾ ಮಂತ್ರಿ ಸಮರ್ಥಿಸಿಕೊಂಡಿದ್ದು ಸರಿಯಲ್ಲ. ಯಾವುದೇ ಕಾರಣಕ್ಕೂ ಕಬೀರ್ ಖಾನ್ ಪ್ರಕರಣವನ್ನು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಲಿ ಎಂದು ರಾಜು ಒತ್ತಾಯಿಸಿದರು.ಚನ್ನಗಿರಿ ತಾಲೂಕು ಮುಖಂಡ ಕೆ.ಎಚ್. ಮಂಜುನಾಥ ಮಾತನಾಡಿದರು. ಹಿಂದೂ ಹಿತರಕ್ಷಣಾ ಸಮಿತಿಯ ವೆಂಕಟೇಶ, ರಾಜೇಶ, ಶಕುಂತಲ, ಮಲ್ಲಮ್ಮ, ಸುರೇಶ ಇದ್ದರು.
- - --18ಕೆಡಿವಿಜಿ7.ಜೆಪಿಜಿ: