ಬಡವರಿಗೆ ನಿವೇಶನ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Dec 09, 2025, 12:45 AM IST
8ಕೆಎಂಎನ್ ಡಿ14 | Kannada Prabha

ಸಾರಾಂಶ

ಪುರಸಭೆ, ತಹಸೀಲ್ದಾರ್ ಕಚೇರಿಗಳಿಂದ ನಿವೇಶನಗಳ ಬೇಡಿಕೆಗೆ ಅನುಗುಣವಾಗಿ ಭೂಮಿ ಕೊಡಬೇಕೆಂದು ಕೇವಲ ಕಚೇರಿ ಕೆಲಸವಾಗಿ ಸುತ್ತಾಯಿಸಿದ್ದು ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಲವು ಬಾರಿ ಈ ವಿಷಯ ಚರ್ಚಿಸಲಾಗಿದೆ. ಆದರೆ, ಇದುವರೆಗೆ ಯಾವುದೇ ಪ್ರಗತಿ ಕಾಣಲಿಲ್ಲ.

ಕನ್ನಡಪ್ರಭ ವಾರ್ತೆ ಮಂಡ್ಯ

ಮಂಡ್ಯ ನಗರದಲ್ಲಿ ವಾಸ ಮಾಡುತ್ತಿರುವ ಬಡವರಿಗೆ ನಿವೇಶನ ಹಕ್ಕುಪತ್ರ ಸೇರಿದಂತೆ ವಿವಿಧ ಮೂಲ ಸೌಕರ್ಯಕ್ಕಾಗಿ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘ, ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರು ನಗರದಲ್ಲಿ ಪ್ರತಿಭಟನಾ ಧರಣಿ ನಡೆಸಿದರು.

ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸೇರಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. 2011ರಿಂದ 2025ರವರೆಗೆ ಹಲವು ಮನವಿಗಳನ್ನು ನಿವೇಶನವಿಲ್ಲದ ಬಡವರಿಗೆ ನಿವೇಶನ ವಿತರಿಸಬೇಕೆಂದು ಒತ್ತಾಯಿಸಲಾಗುತ್ತಿದೆ ಎಂದರು.

ಪುರಸಭೆ, ತಹಸೀಲ್ದಾರ್ ಕಚೇರಿಗಳಿಂದ ನಿವೇಶನಗಳ ಬೇಡಿಕೆಗೆ ಅನುಗುಣವಾಗಿ ಭೂಮಿ ಕೊಡಬೇಕೆಂದು ಕೇವಲ ಕಚೇರಿ ಕೆಲಸವಾಗಿ ಸುತ್ತಾಯಿಸಿದ್ದು ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಲವು ಬಾರಿ ಈ ವಿಷಯ ಚರ್ಚಿಸಲಾಗಿದೆ. ಆದರೆ, ಇದುವರೆಗೆ ಯಾವುದೇ ಪ್ರಗತಿ ಕಾಣಲಿಲ್ಲ. ತುರ್ತಾಗಿ ಭೂಮಿ ಗುರುತಿಸಿ ತಮ್ಮ ವಶಕ್ಕೆ ಪಡೆದು ನಿವೇಶನ ರಹಿತರಿಗೆ ಕುಟುಂಬಗಳ ಸಮೀಕ್ಷೆ ನಡೆಸಿ ನಿವೇಶನ ವಿತರಿಸಬೇಕೆಂದು ಒತ್ತಾಯಿಸಿದರು.

ಬೀಡಿ ಕಾಲೋನಿ, ಕೆರೆ ಅಂಗಳದಲ್ಲಿ ವಾಸಿಸುತ್ತಿರುವ ಬಡವರಿಗೂ ಹಕ್ಕುಪತ್ರ ನೀಡಬೇಕು. ಶಂಕರ ಮಠಕ್ಕೆ ಹೋಗುವ ರಸ್ತೆಯ ಬಲಭಾಗದಲ್ಲಿ ಹುಣಸೆ ಮರಗಳಿದ್ದು, ಈ ಮರಗಳ ಅಡಿಯಲ್ಲಿ 20 ಮನೆಗಳಿದ್ದು, ಮರದ ಬೇರಿನಿಂದ ಮನೆಗಳೆಲ್ಲವೂ ಸಂಪೂರ್ಣ ಬಿರುಕು ಬಿಟ್ಟು ವಾಸ ಮಾಡಲು ಸಾಧ್ಯವೇ ಇಲ್ಲದ ಪರಿಸ್ಥಿತಿ ಉಲ್ಬಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆಯ ನಿರ್ಲಕ್ಷ್ಯದಿಂದ ಪ್ರಾಣಾಪಾಯದಲ್ಲಿ ಬದುಕುತ್ತಿರುವ ಈ ಕುಟುಂಬಗಳಿಗೆ ಸೂಕ್ತ ರಕ್ಷಣೆ ನೀಡಿ ಅಲ್ಲಿ ಇರುವ ಹುಣಸೆ ಮರಗಳನ್ನು ತೆರವುಗೊಳಿಸಿ ಈ ಕುಟುಂಬಗಳಿಗೆ ಹಕ್ಕುಪತ್ರ ನೀಡಿ ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ವೃದ್ಧರು, ಅಂಗವಿಕಲರು, ವಿಧವೆಯರಿಗೆ ನೀಡುತ್ತಿರುವ ಮಾಸಾಶನ ಸಮರ್ಪಕವಾಗಿ ಜಾರಿಯಾಗಬೇಕು. ಈಗ ಕೊಡುತ್ತಿರುವ ಮಾಸಾಶನ ಸಾಲದಾಗಿದ್ದು, ಕನಿಷ್ಠ ತಿಂಗಳಿಗೆ 3 ಸಾವಿರ ರು. ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ಮಂಡ್ಯ ನಗರದ ಕೆರೆ ಅಂಗಳ, ಬೀಡಿ ಕಾಲೋನಿ ಒಳಗೊಂಡಂತೆ ಎಲ್ಲಾ ವಾರ್ಡ್‌ಗಳಿಗೆ ಹದಗೆಟ್ಟಿರುವ ರಸ್ತೆಗಳನ್ನು ರದ್ದು ಗೊಳಿಸಬೇಕು. ಸಾಲ ಕೇಳಿ ಅರ್ಜಿ ಹಾಕಿದ ಎಲ್ಲಾ ಬಡವರಿಗೂ ಆರ್‌ಬಿಐ ನಿರ್ದೇಶನದಂತೆ 2 ಲಕ್ಷ ರು.ಗಳವರೆಗೆ ಬಡ್ಡಿ ರಹಿತ ಸಾಲ ನೀಡಿ ಅವರ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಹನುಮೇಶ್, ಸಿ.ಕುಮಾರಿ, ಅಮಾಸಯ್ಯ, ಅಬ್ದುಲ್ಲಾ, ಸಂತೋಷ್ ಎಂ.ಎಸ್.ಅರುಣ್‌ಕುಮಾರ್, ಬಾನು, ತಾಜ್, ನಸೀಮ, ಸುಮೇರಾ, ಶಾಕೀರಾ ಸೇರಿದಂತೆ ಹಲವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಯೋಗಕ್ಕೆ ಸಲ್ಲಿಕೆಯಾದ ಅರ್ಜಿಗಳು ಜಿಲ್ಲಾ, ತಾಲೂಕುಗಳಿಗೆ ವಿಂಗಡಣೆ: ಡಾ.ಎಲ್.ಮೂರ್ತಿ
ಕಾಫಿ ಕುಡಿಯುತ್ತಾ ಜನರ ಸಮಸ್ಯೆ ಆಲಿಸಿದ ಮಂಜು