ಹಿಂದುಗಳ ಶ್ರದ್ಧಾ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ದೊಡ್ಡ ಪಿತೂರಿ ನಡೆದಿದೆ. ಯಾರೋ ಒಬ್ಬ ನಾನು ಸಾವಿರಾರು ಹೆಣ ಹೊಳಿದಿದ್ದೇನೆ ಎಂದ ತಕ್ಷಣ ಅತನ ಪೂರ್ವಪರ ವಿಚಾರಿಸದೆ ನಗರ ನಕ್ಸಲರ ಒತ್ತಡಕ್ಕೆ ಮಣಿದು ಎಸ್.ಐ.ಟಿ. ರಚಿಸಿದ ರಾಜ್ಯ ಸರ್ಕಾರವು ಈಗ ಷಡ್ಯಂತ್ರದ ನಿಜರೂಪ ಹೊರಬಂದ ಮೇಲೆ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ನಿಧಾನ ನೀತಿ ಅನುಸರಿಸುತ್ತಿದೆ
ಕನ್ನಡ ಪ್ರಭವಾರ್ತೆ ಮಾಲೂರು
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡುತ್ತಿರುವವರನ್ನು ಕೊಡಲೇ ಬಂಧಿಸಿ ಅಸಂಖ್ಯಾತ ಹಿಂದುಗಳ ಭಾವನೆಗೆ ಗೌರವಿಸಬೇಕೆಂದು ಅಗ್ರಹಿಸಿ ಇಲ್ಲಿ ಬಿಜೆಪಿ ಕಾರ್ಯಕರ್ತರು ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ಪಟ್ಟಣದ ಡಾ.ರಾಜ್ ವೃತ್ತದಿಂದ ಮಿನಿವಿಧಾನ ಸೌಧದವರಗೆ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ಷಡ್ಯಂತ್ರಕ್ಕೆ ಸೋಲು ಗ್ಯಾರಂಟಿ, ಧರ್ಮದ ಹೋರಾಟಕ್ಕೆ ಜಯವಾಗಲಿ ಎಂದು ಘೋಷಣೆ ಕೊಗಿದರು.
ನಗರ ನಕ್ಸಲರ ಒತ್ತಡ
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ ಅವರು ಹಿಂದುಗಳ ಶ್ರದ್ಧಾ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ದೊಡ್ಡ ಪಿತೂರಿ ನಡೆದಿದೆ. ಯಾರೋ ಒಬ್ಬ ನಾನು ಸಾವಿರಾರು ಹೆಣ ಹೊಳಿದಿದ್ದೇನೆ ಎಂದ ತಕ್ಷಣ ಅತನ ಪೂರ್ವಪರ ವಿಚಾರಿಸದೆ ನಗರ ನಕ್ಸಲರ ಒತ್ತಡಕ್ಕೆ ಮಣಿದು ಎಸ್.ಐ.ಟಿ. ರಚಿಸಿದ ರಾಜ್ಯ ಸರ್ಕಾರವು ಈಗ ಷಡ್ಯಂತ್ರದ ನಿಜರೂಪ ಹೊರಬಂದ ಮೇಲೆ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ನಿಧಾನ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು.
ಅಲ್ಲದೇ ಯೂಟ್ಯೂಬರ್ಗಳು ಸ್ಪರ್ಧೆಗೆ ಬಿದ್ದವರಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದು, ಅವರ ವಿರುದ್ಧವೂ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕು. ಮುಂದಿನ ತಿಂಗಳ ಮೊದಲ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ರಾಜ್ಯ ಬಿಜೆಪಿ ಕರೆ ನೀಡಿರುವ ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಮಾಲೂರಿನಿಂದ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಲಿದ್ದೇವೆ ಎಂದರುರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.