ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಕೊಡಗು ಜಿಲ್ಲೆ ಭೂ ಗುತ್ತಿಗೆ ವಿರೋಧಿ ಐಕ್ಯ ಹೋರಾಟ ಸಮಿತಿ, ದಲಿತ, ಆದಿವಾಸಿ, ಕೃಷಿ, ಕಾರ್ಮಿಕ, ಮೂಲನಿವಾಸಿ ಸಂಘಟನೆಗಳ ಜಂಟಿ ವೇದಿಕೆ ವತಿಯಿಂದ ಶಿರಸ್ತೇದಾರ್ ಸುಶೀಲ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಜಿಲ್ಲೆಯಲ್ಲಿ ಕಾರ್ಪೋರೇಟ್ಗಳು, ಭೂಮಾಲೀಕರು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಭೂಮಿ ತೆರವುಗೊಳಿಸಿ ಬಡವರಿಗೆ ಹಂಚಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಭೂರಹಿತ ಕೃಷಿ ಕಾರ್ಮಿಕರಿಗೆ ದಲಿತ ಆದಿವಾಸಿ ಕಡು ಬಡವರಿಗೆ ತಕ್ಷಣ ನಿವೇಶನ ಮತ್ತು ಭೂಮಿ ಹಂಚಬೇಕು. ಈಗಾಗಲೇ ಫಾರಂ 57ರಲ್ಲಿ ಸಲ್ಲಿಕೆಯಾಗಿರುವ ಬಡವರ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಬೇಕು, ಉಳಿದವರಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಮುಂದುವರಿಸಬೇಕು ಎಂದು ಒತ್ತಾಯಿಸಲಾಯಿತು.ಜಿಲ್ಲೆಯಲ್ಲಿ ಎಲ್ಲಾ ಜಾತಿಯ ಬಡವರು, ಕೃಷಿ ಕಾರ್ಮಿಕರು ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡಿರುವ 5 ಎಕರೆ ಜಾಗಕ್ಕೆ ಹಕ್ಕುಪತ್ರ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸಮಿತಿ ಪದಾಧಿಕಾರಿಗಳಾದ ಜಯಪ್ಪ ಹಾನಗಲ್, ರವಿ ಶಾಂತಳ್ಳಿ, ಶಿವರಾಜ್ ಗಣಗೂರು, ಶೋಭ, ಸೋನಿ, ರಾಣಿ ಮತ್ತಿತರರು ಇದ್ದರು.