ಖಾಸಗಿ ವಲಯದಲ್ಲಿ ಮೀಸಲಾತಿ, ಉದ್ಯೋಗ ಸೃಷ್ಟಿಗೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Jul 25, 2024, 01:27 AM IST
2 | Kannada Prabha

ಸಾರಾಂಶ

ಸರ್ಕಾರಿ ಹುದ್ದೆಗಳನ್ನು ಶಾಶ್ವತವಾಗಿ ಒಳಗುತ್ತಿಗೆ ಹಾಗೂ ಹೊರ ಗುತ್ತಿಗೆ, ಅತಿಥಿ ಮುಂತಾದ ಹೆಸುರಗಳಲ್ಲಿ ಯಾವುದೇ ಸೇವಾ ಭದ್ರತೆ ಇಲ್ಲದೆ ಬಿಟ್ಟಿ ಚಾಕರಿಯ ನವ ಜೀತಪದ್ಧತಿಯಲ್ಲಿ ಮುಂದುವರೆಸಿದೆ. ಬಹುತೇಕ ದುರ್ಬಲ ಜನ ಸಮುದಾಯಗಳ ನಿರುದ್ಯೋಗಿ ಯುವಜನರನ್ನು ತೀವ್ರ ಶೋಷಣೆಗೀಡು ಮಾಡುವ ಸರ್ಕಾರದ ನಿಲುವನ್ನು ನಮ್ಮ ಸಂಘಟನೆ ಖಂಡಿಸುತ್ತದೆ.

ಕನ್ನಡಪ್ರಭ ವಾರ್ತೆ ಮೈಸೂರು

ಉದ್ಯೋಗ ಸೃಷ್ಟಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು, ಸ್ಥಳೀಯರಿಗೆ ಉದ್ಯೋಗ ಒದಗಿಸಲು ಮುಂದಾಗಬೇಕು ಎಂದು ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಪದಾಧಿಕಾರಿಗಳು ನಗರದ ಗಾಂಧಿ ಚೌಕದ ಗಾಂಧೀಜಿ ಪ್ರತಿಮೆ ಎದುರು ಪ್ರತಿಭಟಿಸಿದರು.

ರಾಜ್ಯ ಸರ್ಕಾರ, ಗುತ್ತಿಗೆ ಆಧಾರದ ಮೇಲೆ ನೌಕರರನ್ನು ನೇಮಿಸಿಕೊಳ್ಳುವಾಗಲೂ ಸ್ಥಳೀಯರಿಗೆ ಮೀಸಲಾತಿ ನೀಡಬೇಕು ಎಂಬ ನಿರ್ಧಾರವನ್ನು ನಮ್ಮ ಸಂಘಟನೆ ಸ್ವಾಗತಿಸುತ್ತದೆ. ಆದರೆ ಈ ಮೀಸಲಾತಿ ಖಾಸಗಿ ವಲಯಕ್ಕೂ ವಿಸ್ತರಣೆ ಆಗಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ಹುದ್ದೆಗಳನ್ನು ಶಾಶ್ವತವಾಗಿ ಒಳಗುತ್ತಿಗೆ ಹಾಗೂ ಹೊರ ಗುತ್ತಿಗೆ, ಅತಿಥಿ ಮುಂತಾದ ಹೆಸುರಗಳಲ್ಲಿ ಯಾವುದೇ ಸೇವಾ ಭದ್ರತೆ ಇಲ್ಲದೆ ಬಿಟ್ಟಿ ಚಾಕರಿಯ ನವ ಜೀತಪದ್ಧತಿಯಲ್ಲಿ ಮುಂದುವರೆಸಿದೆ. ಬಹುತೇಕ ದುರ್ಬಲ ಜನ ಸಮುದಾಯಗಳ ನಿರುದ್ಯೋಗಿ ಯುವಜನರನ್ನು ತೀವ್ರ ಶೋಷಣೆಗೀಡು ಮಾಡುವ ಸರ್ಕಾರದ ನಿಲುವನ್ನು ನಮ್ಮ ಸಂಘಟನೆ ಖಂಡಿಸುತ್ತದೆ ಎಂದರು.

ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳನ್ನು ಸ್ಥಾಪಿಸುವುದರ ಜತೆಗೆ ಉದ್ಯೋಗ ಸೃಷ್ಟಿಗೆ ಗಮನ ನೀಡಬೇಕು ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಿ ಕಾಯಂ ಮಾಡಬೇಕು. ಸ್ಥಳೀಯರಿಗೆ ಉದ್ಯೋಗ ಒದಗಿಸಲು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು. ಉದ್ಯೋಗ ಒದಗಿಸದಿದ್ದರೆ ಮಾಸಿಕ 12 ಸಾವಿರ ನಿರುದ್ಯೋಗ ಭತ್ಯೆ ನೀಡಬೇಕು ಎಂದು ಫೆಡರೇಷನ್ ಪದಾಧಿಕಾರಿಗಳು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ರಾಘವೇಂದ್ರ, ಮೊದಲಾದವರು ಇದ್ದರು.

ರೈತರಿಗೆ ಮೂರು ದಿನಗಳ ತರಬೇತಿ

ಮೈಸೂರು: ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆ. 1 ರಿಂದ 3 ರವರೆಗೆ ಬಾಳೆ ಬೆಳೆಗಳಲ್ಲಿ ತಳಿ ಆಯ್ಕೆ, ಆಧುನಿಕ ಕೃಷಿ ಪದ್ದತಿಗಳು, ಸೂಕ್ಷ್ಮನೀರಾವರಿ ಮತ್ತು ರಸಾವರಿ ತಾಂತ್ರಿಕತೆಗಳ ಅಳವಡಿಕೆ ಮೂಲಕ ಅಧಿಕ ಲಾಭ ಎಂಬ ವಿಷಯದ ಬಗ್ಗೆ ರೈತ, ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಆಯೋಜಿಸಿದೆ. ತರಬೇತಿಯಲ್ಲಿ ಭಾಗವಹಿಸುವ ರೈತ, ರೈತ ಮಹಿಳೆಯರಿಗೆ ಊಟ ಮತ್ತು ವಸತಿ ವ್ಯವಸ್ಥೆ ಒದಗಿಸಲಾಗುವುದು. ಆಸಕ್ತ ರೈತ, ರೈತ ಮಹಿಳೆಯರು ತಮ್ಮ ಹೆಸರನ್ನು ಈ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಮೊ. 8277933177 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸತಕ್ಕದ್ದು. ಕೇವಲ ಮೈಸೂರು ಜಿಲ್ಲೆಯ 40 ರೈತ, ರೈತ ಮಹಿಳೆಯರಿಗೆ ಮಾತ್ರ ಅವಕಾಶವಿದ್ದು, ಮೊದಲು ನೋಂದಣಿ ಮಾಡಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!