ಬ್ಯಾಡಗಿ: ತಾಲೂಕಿನ ಕಾಗಿನೆಲೆ ಗ್ರಾಮದಲ್ಲಿನ ಕನಕದಾಸ ವೃತ್ತದಿಂದ ಚನ್ನಕೇಶವ ದೇವಸ್ಥಾನದೆವರೆಗೆ ರಸ್ತೆ ಅಗಲೀಕರಣ ಹಾಗೂ ಗ್ರಾಮದಲ್ಲಿನ ಟಿಪ್ಪು ಸುಲ್ತಾನ್ ಸರ್ಕಲ್ ಅಭಿವೃದ್ಧಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ಹಾಗೂ ಆಮ್ ಆದ್ಮಿ ಪಾರ್ಟಿ ವತಿಯಿಂದ ಸೋಮವಾರ ನೂರಾರು ಜನರು ಬೃಹತ್ ಪ್ರತಿಭಟನೆ ನಡೆಸಿದರು.ಗ್ರಾಮದ ಕನಕದಾಸ ಸರ್ಕಲ್ದಿಂದ ಆರಂಭವಾದ ಬೃಹತ್ ಮೆರವಣಿಗೆಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳಲ್ಲಿ ಸಸಿಗಳನ್ನು ನೆಡುವ ಮೂಲಕ ಹೋರಾಟಗಾರರು ವಿನೂತನವಾಗಿ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಎನ್. ನಾಯಕ್ ಅವರು, ರಾಜ್ಯದಲ್ಲಿ ಕಾಗಿನೆಲೆ ಗ್ರಾಮ ತನ್ನದೇ ಆದ ಐತಿಹ್ಯವನ್ನು ಹೊಂದಿದೆ. ಪ್ರವಾಸಿ ಕೇಂದ್ರವಾಗಿ ಈಗಾಗಲೇ ರಾಜ್ಯದ ಮನೆಮಾತಾಗಿರುವ ಕಾಗಿನೆಲೆ ಗ್ರಾಮದಲ್ಲಿ ಗುಣಮಟ್ಟದ ರಸ್ತೆಗಳಿಲ್ಲ. ಇದು ನಾಚಿಗೇಡಿನ ಸಂಗತಿ.
ಈ ವೇಳೆ ಮುಖಂಡರಾದ ಸಾಧಿಕ್ ಕಲ್ಲಾಪುರ, ಮಾಲ್ತೇಶ ಕಟ್ಟಿಮನಿ, ಅಶೋಶ ವರ್ದಿ, ಮೊಲಾಲಿ ಮುಲ್ಲಾ, ಎಸ್. ಇಂಗಳಗುಂದಿ, ನ್ಯಾಯವಾದಿ ಅಲ್ಪಾಜ್ ಮತ್ತಿಹಳ್ಳಿ, ಮತ್ತು ಊರಿನ ಸಮಸ್ತ ನಾಗರಿಕರು ಉಪಸ್ಥಿತರಿದ್ದರು.