ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Jun 17, 2024, 01:36 AM IST
16-ಎಂಎಸ್ಕೆ-01:  | Kannada Prabha

ಸಾರಾಂಶ

ನಟ ದರ್ಶನ್ ಹಾಗೂ ಸಹವರ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಶಿರಸ್ತೆದಾರ ಸಯ್ಯದ್ ಅಕ್ತರ್ ಅಲಿಗೆ ಮನವಿ

ಮಸ್ಕಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಚಿತ್ರ ನಟ ದರ್ಶನ್ ಮತ್ತು ಎಲ್ಲಾ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ, ಮಸ್ಕಿತಾಲೂಕು ಜಂಗಮ ಸೇವಾ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು.

ಮಸ್ಕಿ ಪಟ್ಟಣದ ಬಸವ ವೃತ್ತದಿಂದ ಮೆರವಣಿಗೆ ತಹಸೀಲ್ದಾರ್ ಕಚೇರಿಗೆ ತಲುಪಿತು. ನಂತರ ಈ ಸಂದರ್ಭ ಜಂಗಮ ಸಮಾಜದ ಮುಖಂಡರು ಮಾತನಾಡಿ, ಚಿತ್ರನಟ ದರ್ಶನ್ ನಾಯಕ ನಟನಾಗಿ ಖಳನಾಯಕನಂತೆ ವರ್ತನೆ ಮಾಡಿ ಅಮಾಯಕ ಯುವಕ ರೇಣುಕಾಸ್ವಾಮಿ ಕೊಲೆ ಮಾಡಿಸಿದ್ದಾರೆ. ನಟ ದರ್ಶನ್ ಹಾಗೂ ಸಹವರ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಶಿರಸ್ತೆದಾರ ಸಯ್ಯದ್ ಅಕ್ತರ್ ಅಲಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಸಮಿತಿ ಅಧ್ಯಕ್ಷ ಕರಿಬಸಯ್ಯ ಸ್ವಾಮಿ, ಪದಾಧಿಕಾರಿಗಳಾದ ಘನ ಮಠದಯ್ಯಸಾಲಿ ಮಠ, ಸಿದ್ದ ಲಿಂಗಯ್ಯ ಗಚ್ಚಿನಮಠ, ಡಾ. ಪಂಚಾಕ್ಷರಯ್ಯ, ಎನ್. ಶಿವಕುಮಾರ, ಜಗದೀಶ ತಾತ ಹಾಲಾಪೂರ, ಬಸವರಾಜ ಸ್ವಾಮಿಹಸ್ಮಕಲ್, ಆದಯ್ಯ ಸ್ವಾಮಿ ಕ್ಯಾತ್ನಟ್ಟಿಚಂದ್ರಶೇಖರ ಉದ್ದಾಳ ಇತರ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ