ಸರ್ಕಾರಿ ಶಾಲೆ ಮುಚ್ಚದಂತೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Dec 31, 2025, 02:45 AM IST
ಗ್ರಾಮದ ಸರ್ಕಾರಿ ಶಾಲೆಯನ್ನು ಮುಚ್ಚಬಾರದು ಎಂದು ಒತ್ತಾಯಿಸಿ ಬಳ್ಳಾರಿ ತಾಲೂಕಿನ ಅಸುಂಡಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.  | Kannada Prabha

ಸಾರಾಂಶ

ಗ್ರಾಮದ ಸರ್ಕಾರಿ ಶಾಲೆಯನ್ನು ಮುಚ್ಚಬಾರದು ಎಂದು ಒತ್ತಾಯಿಸಿ ಬಳ್ಳಾರಿ ತಾಲೂಕಿನ ಅಸುಂಡಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಬಳ್ಳಾರಿ: ನಮ್ಮೂರ ಸರ್ಕಾರಿ ಶಾಲೆಯನ್ನು ಮುಚ್ಚಬಾರದು ಎಂದು ಒತ್ತಾಯಿಸಿ ತಾಲೂಕಿನ ಅಸುಂಡಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟ (ಎಐಡಿಎಸ್‌ಓ) ಸಂಘಟನೆಯ ನೇತೃತ್ವದಲ್ಲಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ರಾಜ್ಯ ಸರ್ಕಾರ ರಾಜ್ಯದ ಸಾವಿರಾರು ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಬಳ್ಳಾರಿ ತಾಲೂಕಿನ ಕಕ್ಕಬೇವಿನಹಳ್ಳಿಯ ಪ್ರೌಢಶಾಲೆಯನ್ನು ಕೆಪಿಎಸ್-ಮ್ಯಾಗ್ನೆಟ್ ಶಾಲೆಯನ್ನಾಗಿಸಿ ಅಸುಂಡಿ ಗ್ರಾಮದ ಶಾಲೆಯನ್ನು ಅಲ್ಲಿಗೆ ಸೇರಿಸಲಾಗುತ್ತಿದೆ. 300ಕ್ಕೂ ಹೆಚ್ಚು ದಾಖಲಾತಿ ಹೊಂದಿರುವ ಈ ಶಾಲೆಯನ್ನು ಮುಚ್ಚುತ್ತಿರುವುದು ಸರ್ಕಾರವು ಬಡವರ ಮಕ್ಕಳಿಗೆ ಮಾಡುವ ದ್ರೂಹವಾಗಿದ್ದು, ಅಸುಂಡಿ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚದೆ, ಶಾಲೆಗೆ ಬೇಕಾದ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಹೋರಾಟದ ನೇತೃತ್ವ ವಹಿಸಿದ್ದ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, ರಾಜ್ಯದಲ್ಲಿ ಒಂದೇ ಒಂದು ಸರ್ಕಾರಿ ಶಾಲೆಯನ್ನು ಮುಚ್ಚಲು ನಾವು ಬಿಡುವುದಿಲ್ಲ. ಸರ್ಕಾರಿ ಶಾಲೆಗಳನ್ನು ಮುಚ್ಚುವ ಬದಲು, ಸರ್ಕಾರ ಸ್ಥಳೀಯ ಶಾಲೆಗಳಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಕಲ್ಪಿಸಲಿ ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಕೆ. ಈರಣ್ಣ, ಸರ್ಕಾರಿ ಶಾಲೆ ಉಳಿಸಿ ಸಮಿತಿಯ ಸದಸ್ಯರಾದ ಬಸವರಾಜ್, ಹೊನ್ನೂರ್ ಸ್ವಾಮಿ, ಮೋಹನ್, ಬಸವರಾಜ ಸ್ವಾಮಿ, ಭಾಷಾ ಸೇರಿದಂತೆ ಗ್ರಾಮದ ನೂರಾರು ಜನರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ, ಸರ್ಕಾರ ಶಾಲೆ ಉಳಿವಿಗೆ ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ
ಶೆಡ್‌ ತೆರವಿನ ಪ್ರಕರಣದಲ್ಲಿ ಪಾಕ್‌ ಹಸ್ತಕ್ಷೇಪಕ್ಕೆ ಕೈ ಕಿಡಿ