ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಹುದ್ದೆಯನ್ನು ಹಾಸನ ನಗರದ ವ್ಯಾಪ್ತಿಯಲ್ಲಿರುವಂತಹ ಸ್ಥಳೀಯ ಕಾರ್ಯಕರ್ತರಿಗೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ವೇಳೆ ಬಿ.ಎಂ. ರಸ್ತೆ ತಡೆ ನಡೆಸಿ ಬಳಿಕ ಹುಡಾ ಕಚೇರಿ ಮುಂದೆ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಬಂದು ಸುಮಾರು ಎರಡು ವರ್ಷಗಳ ಕಾಲ ಕಳೆದರೂ ಸಹ ಈವರೆಗೂ ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಸರ್ಕಾರಿ ನಾಮಿನಿ ಮಾಡದೇ ಇರುವುದು ಕಾಂಗ್ರೇಸ್ ಪಕ್ಷದ ಕಾರ್ಯಕರ್ತರಿಗೆ ಸರ್ಕಾದ ಮುಖಂಡರ ಮೇಲೆ ಬೇಸರ ಬರಲು ಕಾರಣವಾಗಿದೆ ಎಂದು ದೂರಿದರು.
ಕನ್ನಡಪ್ರಭವಾರ್ತೆ ಹಾಸನ
ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಹುದ್ದೆಯನ್ನು ಹಾಸನ ನಗರದ ವ್ಯಾಪ್ತಿಯಲ್ಲಿರುವಂತಹ ಸ್ಥಳೀಯ ಕಾರ್ಯಕರ್ತರಿಗೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ವೇಳೆ ಬಿ.ಎಂ. ರಸ್ತೆ ತಡೆ ನಡೆಸಿ ಬಳಿಕ ಹುಡಾ ಕಚೇರಿ ಮುಂದೆ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ನಗರಸಭೆ ಮಾಜಿ ಸದಸ್ಯ ಚಂದ್ರಶೇಖರ್ ಮಾಧ್ಯಮದೊಂದಿಗೆ ಮಾತನಾಡಿ, ಹಾಸನ ನಗರದ ನರಾಭಿವೃದ್ಧಿ ಪ್ರಾಧಿಕಾರದ ಹುದ್ದೆಯನ್ನು ಹಾಸನದ ಸ್ಥಳೀಯ ಕಾರ್ಯಕರ್ತರಿಗೆ ನೀಡಬೇಕಾಗಿದ್ದು, ಕಾಂಗ್ರೆಸ್ ಸರ್ಕಾರ ಬಂದು ಸುಮಾರು ಎರಡು ವರ್ಷಗಳ ಕಾಲ ಕಳೆದರೂ ಸಹ ಈವರೆಗೂ ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಸರ್ಕಾರಿ ನಾಮಿನಿ ಮಾಡದೇ ಇರುವುದು ಕಾಂಗ್ರೇಸ್ ಪಕ್ಷದ ಕಾರ್ಯಕರ್ತರಿಗೆ ಸರ್ಕಾದ ಮುಖಂಡರ ಮೇಲೆ ಬೇಸರ ಬರಲು ಕಾರಣವಾಗಿದೆ ಎಂದು ದೂರಿದರು.
ಹಾಸನ ವಿಧಾನ ಸಭಾ ಕ್ಷೇತ್ರದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ನಗರದ ಸ್ಥಳೀಯವಾಗಿ ವಾಸವಾಗಿರುವಂತಹ ಯಾವುದೇ ಜಾತಿ ಮತ್ತು ಧರ್ಮದವರಾದ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಬೇಕಾಗಿರುವುದು ಅತ್ಯವಶ್ಯಕವಾಗಿರುತ್ತದೆ. ಇಲ್ಲವಾದಲ್ಲಿ ನಮ್ಮ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಕಳೆದುಕೊಳ್ಳುವ ಭೀತಿ ಉಂಟಾಗುವ ಸಂಭವವಿರುತ್ತದೆ ಎಂದು ಎಚ್ಚರಿಸಿದರು. ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಈ ಮೌನ ಪ್ರತಿಭಟನೆಯ ಮುಖೇನ ತಿಳಿಯಬಯಸುತ್ತಿದ್ದೇವೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಾಘವೇಂದ್ರ, ಅಸ್ಲಾಂ ಪಾಷಾ, ಇಮ್ರಾನ್ ಖಾನ್, ಕುಮಾರಸ್ವಾಮಿ, ವಿನೋದ್, ಲೋಕೇಶ್, ಕುಮಾರ್, ಆರೀಫ್ ಖಾನ್, ಪುಟ್ಟೇಗೌಡ, ಗುರುಪ್ರಸಾದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.