ಕನ್ನಡಪ್ರಭ ವಾರ್ತೆ ವಿಜಯಪುರ
ನಗರದಲ್ಲಿ ಕನ್ಹೇರಿ ಸ್ವಾಮೀಜಿಗಳ ಪ್ರವೇಶ ನಿರ್ಬಂಧವನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಹಿಂದೂ ಜಾಗೃತ ವೇದಿಕೆ ನೇತೃತ್ವದಲ್ಲಿ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಹಿಂದೆ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ವೇಳೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲರು ರಂಭಾಪುರಿ, ಶ್ರೀಶೈಲ ಜಗದ್ಗುರುಗಳ ಬಗ್ಗೆ ನಡೆದುಕೊಂಡ ರೀತಿ ಇಡೀ ಸಮಾಜಕ್ಕೆ ಗೊತ್ತಿದೆ. ಈಗಲೂ ಅವರೇ ಕನ್ಹೇರಿ ಶ್ರೀಗಳ ಪ್ರವೇಶ ನಿರ್ಬಂಧದ ಹಿಂದೆ ಇದ್ದಾರೆ ಎಂದರು.
ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ನಡೆಸಿದ ನೀವು ಹಿಂದೂ ಅಲ್ಲ ಎನ್ನುತ್ತೀರಿ. ಆದರೆ ಮನೆಯಲ್ಲಿ ಶ್ರೀ ಕೃಷ್ಣನ ಪೂಜೆ ಮಾಡುತ್ತೀರಿ. ಹಾಗಾದರೆ ನೀವು ಹಿಂದೂ ಎಂಬುದನ್ನು ಒಪ್ಪಿಕೊಳ್ಳಿ, ಆಡುವ ಮಾತು ಒಂದು, ನಡೆದುಕೊಳ್ಳುವ ರೀತಿ ಮತ್ತೊಂದು. ಈ ರೀತಿ ಒಡೆದಾಳುವ ನೀತಿಯ ಬಗ್ಗೆ ಲಿಂಗಾಯತ ಮಠಾಧೀಶರು ಎಚ್ಚೆತ್ತುಕೊಳ್ಳಬೇಕು. ಧರ್ಮ ಕಾಲಂನಲ್ಲಿ ಹಿಂದೂ ಎಂದೇ ಬರೆಸಿ. ಲಿಂಗಾಯತ ಎಂದು ಬರೆಯಿಸಿ ಎಂದು ಹೇಳುವುದು ಒಡೆದಾಳುವ ಪ್ರಯತ್ನ, ಈ ಪ್ರಯತ್ನಕ್ಕೆ ಯಾರು ಬಲಿಯಾಗಬೇಡಿ ಎಂದು ಎಚ್ಚರಿಸಿದರು.ಹಿಂದು ಸಂಘಟನೆ ಮುಖಂಡ ರಾಘವ ಅಣ್ಣಿಗೇರಿ ಮಾತನಾಡಿ, ಕನ್ಹೇರಿ ಶ್ರೀಗಳು ಹಿಂದುತ್ವಕ್ಕಾಗಿ, ಸಮಾಜಕ್ಕಾಗಿ, ರೈತರಿಗಾಗಿ, ರೋಗಿಗಳಿಗಾಗಿ ಸಾಕಷ್ಟು ಸೇವೆ ಮಾಡಿದ್ದಾರೆ. ಇಂತಹವರ ವಿರುದ್ಧ ನಿರ್ಬಂಧ ಹೇರಿರುವುದು ಅಕ್ಷಮ್ಯ ಅಪರಾಧವಾಗಿದೆ. ತಕ್ಷಣವೇ ನಿರ್ಬಂಧ ತೆರವುಗೊಳಿಸಬೇಕು, ಇಲ್ಲವಾದಲ್ಲಿ ಇದು ಇನ್ನಷ್ಟು ಉಗ್ರ ಹೋರಾಟದ ಸ್ವರೂಪ ಪಡೆದುಕೊಳ್ಳಲಿದೆ ಎಂದರು.
ಸಹಕಾರಿ ಧುರೀಣ ರಮೇಶ ಬಿದನೂರ ಮಾತನಾಡಿ, ಕನ್ಹೇರಿ ಶ್ರೀಗಳ ಪೂರ್ವಾಶ್ರಮ ವಿಜಯಪುರ. ಇಲ್ಲಿಯೇ ಅವರಿಗೆ ಪ್ರವೇಶ ನಿರ್ಬಂಧಿಸಿರುವುದು ಅತ್ಯಂತ ನೋವಿನ ಸಂಗತಿ. ಇಡೀ ವಿಜಯಪುರ ಅಷ್ಟೇ ಅಲ್ಲ ಇಡೀ ಕರ್ನಾಟಕ ಅವರ ನಿಷೇಧ ವಾಪಾಸ್ ಪಡೆಯುವಂತೆ ಒತ್ತಾಯಿಸುತ್ತಿದೆ, ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಜನರ ಭಾವನೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.