ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ಹೋರಾಟ: ಎಸ್‌.ಸಚ್ಚಿದಾನಂದ

KannadaprabhaNewsNetwork |  
Published : Jul 29, 2026, 01:30 AM IST
ಎಸ್‌.ಸಚ್ಚಿದಾನಂದ | Kannada Prabha

ಸಾರಾಂಶ

ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸರಿಯಾದ ವಾದ ಮಂಡಿಸುವಲ್ಲಿ ರಾಜ್ಯಸರ್ಕಾರ ವಿಫಲವಾಗಿದೆ. ಅದರ ಪರಿಣಾಮ ಇಂತಹ ಆದೇಶ ಹೊರಬಿದಿದ್ದೆ. ಕಾಂಗ್ರೆಸ್ ಸರ್ಕಾರಕ್ಕೆ ರೈತಪರ ಕಾಳಜಿ ಇಲ್ಲ. ಕೇವಲ ಸಚಿವ ಸಂಪುಟ ರಚನೆಗಷ್ಟೇ ಆದ್ಯತೆ ನೀಡಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿರುವ ಶಿಫಾರಸು ಪಾಲನೆ ಮಾಡುವ ನೆಪದಲ್ಲಿ ತಮಿಳುನಾಡಿಗೆ ನೀರು ಬಿಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಮಾಡಿದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ನಾಯಕ ಇಂಡುವಾಳು ಸಚ್ಚಿದಾನಂದ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸರಿಯಾದ ವಾದ ಮಂಡಿಸುವಲ್ಲಿ ರಾಜ್ಯಸರ್ಕಾರ ವಿಫಲವಾಗಿದೆ. ಅದರ ಪರಿಣಾಮ ಇಂತಹ ಆದೇಶ ಹೊರಬಿದಿದ್ದೆ. ಕಾಂಗ್ರೆಸ್ ಸರ್ಕಾರಕ್ಕೆ ರೈತಪರ ಕಾಳಜಿ ಇಲ್ಲ. ಕೇವಲ ಸಚಿವ ಸಂಪುಟ ರಚನೆಗಷ್ಟೇ ಆದ್ಯತೆ ನೀಡಿದೆ. ಇಲ್ಲದಿದ್ದರೆ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ ಎದುರು ಮಂಡಿಸುತ್ತಿತ್ತು ಎಂದು ದೂರಿದ್ದಾರೆ.

ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಡ್ಯಾಂಗಳಲ್ಲಿ ನೀರಿನ ಪ್ರಮಾಣ ಇಳಿಮುಖವಾಗುತ್ತಿದೆ. ಇದರ ಬಗ್ಗೆ ಜ್ಞಾನವಿಲ್ಲದೆ ಕದ್ದುಮುಚ್ಚಿ ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ ಇಂತಹ ಆದೇಶ ಹೊರಬಿದ್ದಿದೆ. ರೈತರು ಎಷ್ಟೇ ಪ್ರತಿಭಟನೆ ನಡೆಸಿದರೂ ನಾಲೆಗೆ ನೀರು ಬಿಡಲು ನಿರ್ಲಕ್ಷ್ಯ ತೋರಲಾಗಿತ್ತು. ಆದರೆ, ತನ್ನ ಮಿತ್ರಪಕ್ಷಕ್ಕೆ ಅನುಕೂಲವಾಗಲೆಂದು ತಮಿಳುನಾಡಿಗೆ ನೀರು ಹರಿಸುವ ಮೂಲಕ ನಮ್ಮ ರೈತರಿಗೆ ಅನ್ಯಾಯ ಮಾಡಿದೆ. ಏನೇ ಇರಲಿ, ಯಾವುದೇ ಕಾರಣಕ್ಕೂ ನೀರು ಬಿಡಬಾರದು. ಇಲ್ಲದಿದ್ದರೆ ಅದರಿಂದಾಗುವ ಪರಿಣಾಮವನ್ನು ರಾಜ್ಯಸರ್ಕಾರವೇ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿ ಗ್ರಾ.ಪಂನಲ್ಲಿ ಅರ್ಹ ಮೂವರು ಗೃಹಲಕ್ಷ್ಮಿಯರಿಗೆ ಸನ್ಮಾನ: ಎಲ್.ಪಿ. ಪ್ರಕಾಶ್‌ಗೌಡ
ಸೌಲಭ್ಯ ವಂಚಿತರಿಗೆ ನೆರವಾಗುವ ದೊಡ್ಡ ಸಂಸ್ಥೆ ರೋಟರಿ: ಅಲೆನ್ ವಿನಯ್ ಲಿವಿಸ್