ಕನ್ನಡಪ್ರಭ ವಾರ್ತೆ ಚಾಮರಾಜನಗರ
ರೈತರು ಬೆಳೆದ ಎಲ್ಲಾ ಬೆಳೆಗಳನ್ನು ಎಂ.ಎಸ್.ಪಿ. ದರದಲ್ಲಿ ಖರೀದಿಸಲು ಪ್ರತಿ ಹೋಬಳಿ ಮಟ್ಟದಲ್ಲಿ ಖರೀದಿ ಕೇಂದ್ರ ತೆರೆಯಬೇಕು. ರೈತರ ಎಲ್ಲಾ ಬೆಳೆಗಳಿಗೂ ಪ್ರಧಾನ ಮಂತ್ರಿ ಫಸಲು ಭಿಮಾ ಯೋಜನೆಯನ್ನು ವಿಸ್ತರಿಸಿ ಗ್ರಾಮ ಮಟ್ಟದಲ್ಲಿ ಬೆಳೆ ಹಾನಿ ನಿರ್ಧರಿಸಬೇಕು ಎಂದರು. ಕಾಡು ಪ್ರಾಣಿಗಳಿಂದ ಹಾಳಾದ ಆಸ್ತಿ ಪ್ರಾಣ ಹಾನಿ, ಬೆಳೆಗಳಿಗೆ ವೈಜ್ಞಾನಿಕವಾಗಿ ನಷ್ಟವನ್ನು ಭರಿಸಬೇಕು ಮತ್ತು ರೈತರ ಜಮೀನಿನಲ್ಲಿ ಬೆಳೆಯುವ ಸಾಗುವಾನಿ ಮರಗಳ ಕಡಿತಲೆ ಮತ್ತು ಸಾಗಣೆ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಬೇಕು ಎಂದರು.ರೈತರು ಪಡೆದಿರುವ ಕೃಷಿ ಸಾಲಕ್ಕೆ ಎಲ್ಲಾ ಬ್ಯಾಂಕ್ ನವರು ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದು ಪ್ರಸಕ್ತ ಸಾಲಿನಲ್ಲಿ ಬರ ಇರುವುದರಿಂದ ರೈತರ ಎಲ್ಲಾ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಎಂದರು. ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸುಮಾರು 30ರಿಂದ 40 ವರ್ಷಗಳಿಂದಲೂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಪತ್ರ ನೀಡಿ ಶೀಘ್ರದಲ್ಲಿ ಪೋಡಿ ದುರಸ್ತಿ ಮಾಡಿಕೊಡಬೇಕು ಎಂದು ಆಗ್ರಹಿಸಿದರು. ರಾಜ್ಯ ರೈತಸಂಘ ಉಪಾಧ್ಯಕ್ಷ ಎ.ಎಂ.ಮಹೇಶ್ ಪ್ರಭು, ಚಾಮರಾಜನಗರ ಜಿಲ್ಲಾ ಸಮಿತಿ ಅಧ್ಯಕ್ಷ ಶಿವಪುರ ಮಹಾದೇವಪ್ಪ, ಹೆಬ್ವಸೂರುಬಸವಣ್ಣ, ಜ್ಯೋತಿಗೌಡನಪುರ ಸಿದ್ದರಾಜು, ಹೆಗ್ಗವಾಡಿಪುರಮಹೇಶ್ ಕುಮಾರ್, ಮರಿಯಾಲಮಹೇಶ್, ಮೂಡ್ನಾಕೂಡು ಮಹೇಶ್, ರೈತಸಂಘ ಯುವಘಟಕದ ಅಧ್ಯಕ್ಷ ಯಶವಂತ್ ಸೇರಿದಂತೆ ವಿವಿಧ ಗ್ರಾಮಗಳ ರೈತರು ಭಾಗವಹಿಸಿದ್ದರು.