ಅಂಜಲಿ ಕೊಲೆ ಖಂಡಿಸಿ ಚಿತ್ತಾಪುರದಲ್ಲಿ ಪ್ರತಿಭಟನೆ, ಮನವಿ

KannadaprabhaNewsNetwork |  
Published : May 21, 2024, 12:32 AM IST
ಚಿತ್ತಾಪುರ ತಾಲೂಕು ಕೊಲಿ ಸಮಾಜದ ವತಿಯಿಂದ  ಹುಬ್ಬಳ್ಳಿ ನಗರದಲ್ಲಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೊಪಿಗಳಿಗೆ ಕಠೀಣ ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿ ತಾಲೂಕು ಅಧ್ಯಕ್ಷ ರಾಮಲಿಂಗ ಬಾನರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು. | Kannada Prabha

ಸಾರಾಂಶ

ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು, ಸರ್ಕಾರವೇ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಒತ್ತಾಯಿಸುವ ಮನವಿ ಪತ್ರವನ್ನು ತಹಸೀಲ್ದಾರ್‌ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ತಾಲೂಕು ಕೋಲಿ ಸಮಾಜದ ವತಿಯಿಂದ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಚಿತ್ತಾಪುರ

ಹುಬ್ಬಳ್ಳಿ ನಗರದ ಅಂಜಲಿ ಅಂಬಿಗೇರ ಎನ್ನುವ ಯುವತಿಯನ್ನು ಅಮಾನುಷವಾಗಿ ಕೊಲೆ ಮಾಡಿರುವ ಘಟನೆಯನ್ನು ಕೋಲಿ ಸಮಾಜವು ಉಗ್ರವಾಗಿ ಖಂಡಿಸುತ್ತದೆ ಎಂದು ತಾಲೂಕು ಕೋಲಿ ಸಮಾಜದ ಅಧ್ಯಕ್ಷ ರಾಮಲಿಂಗ ಬಾನರ್ ತಿಳಿಸಿದರು.

ಪಟ್ಟಣದಲ್ಲಿ ಪ್ರತಿಭಟನೆ ನಂತರ ಮಾತನಾಡಿದ ಅವರು, ಪ್ರೀತಿಯ ಹೆಸರಿನಲ್ಲಿ ಕೊಲೆ ಮಾಡುವ ಘಟನೆಗಳು ಸಮಾಜದಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಹೆಣ್ಣು ಮಕ್ಕಳ ಸುರಕ್ಷತೆಯ ಕುರಿತು ಪೋಷಕರು ಭಯ, ಆತಂಕದಲ್ಲಿ ಜೀವನ ಮಾಡುವಂತಹ ವಾತಾವರಣ ಸೃಷ್ಟಿಯಾಗಿದೆ. ಇಂತಹ ಭಯ, ಆತಂಕ ನಿವಾರಣೆ ಮಾಡುವ ಜವಬ್ದಾರಿ ಸರ್ಕಾರದ ಮೇಲಿದೆ. ಇಂತಹ ದುಷ್ಕೃತ್ಯಗಳಿಗೆ ಕಡಿವಾಣ ಹಾಕಲು ಸರ್ಕಾರವು ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.

ಅಂಜಲಿ ತನಗೆ ಜೀವ ಬೆದರಿಕೆ ಇದೆ ಎಂದು ಪೊಲೀಸರಿಗೆ ದೂರು ಸಲ್ಲಿಸಿದ್ದರೂ ಕೂಡಾ ಪೊಲೀಸ್ ಇಲಾಖೆ ಕೊಲೆ ಬೆದರಿಕೆಯೊಡ್ಡಿದ್ದ ಆರೋಪಿಯ ವಿರುದ್ಧ ಯಾವುದೇ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಕಡೆಗಣನೆ ಹಾಗೂ ಕರ್ತವ್ಯ ಲೋಪ ಎಸಗಿದ್ದರಿಂದ ಅಂಜಲಿ ಕೊಲೆ ನಡೆದಿದೆ. ಇಂತಹ ಪೊಲೀಸ್‌ ಅಧಿಕಾರಿಗಳನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಅಂಜಲಿ ಕುಟುಂಬಕ್ಕೆ ಸರ್ಕಾರವು ಮಾನವೀಯ ನೆಲೆಗಟ್ಟಿನಲ್ಲಿ ಪರಿಗಣಿಸುವ ಮೂಲಕ ಸೂಕ್ತ ಪರಿಹಾರ ಧನವನ್ನು ನೀಡುವುದಲ್ಲದೇ ಸರ್ಕಾರವೇ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಒತ್ತಾಯಿಸುವ ಮನವಿ ಪತ್ರವನ್ನು ತಹಸೀಲ್ದಾರ್‌ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಕೋಲಿ ಸಮಾಜದ ಮುಖಂಡರಾದ ಹಣಮಂತ ಸಂಕನೂರ, ಮಲ್ಲಿಕಾರ್ಜುನ ಎಮ್ಮೆನೋರ, ಸುರೇಶ ಬೆನಕನಹಳ್ಳಿ, ಭೀಮಣ್ಣ ಹೊತಿನಮಡಿ, ಗುಂಡು ಐನಾಪುರ, ದಶರಥ ದೊಡ್ಮನಿ, ತಮ್ಮಣ್ಣ ಡಿಗ್ಗಿ, ಶರಣು ಮುಡಬೂಳ, ರಾಜೇಶ ಹೊಳಿಕಟ್ಟಿ, ದೇವಿಂದ್ರ ಅಣಕಲ್, ನಾಗೇಂದ್ರ ಜೈಗಂಗಾ, ಕರಣ ಅಲ್ಲೂರ, ಸಾಬಣ್ಣ ಹೊಳಿಕಟ್ಟಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿರ್ಗಿಸ್ತಾನ್‌ ಸಚಿವರೊಂದಿಗೆ ಎಚ್‌ಡಿಕೆ ಚರ್ಚೆ
ಹಾಕಿ ಆಟಗಾರರಿಗೆ ವಂಚಿಸಿದ ಸಂಸ್ಥೆ ವಿರುದ್ಧದ ಕೇಸ್‌ ರದ್ದಿಲ್ಲ: ಹೈಕೋರ್ಟ್