ಕನ್ನಡಪ್ರಭ ವಾರ್ತೆ ಶಹಾಪುರ
ಈ ವೇಳೆ ಮಾತನಾಡಿದ ಸಂಘದ ತಾಲೂಕಾಧ್ಯಕ್ಷ ಶರಣ್ ಎಸ್. ಗೊಂದೆನವರ್ ಅವರು, ಈ ಘಟನೆ ಅತ್ಯಂತ ಆಘಾತಕಾರಿ. ಕಾನೂನು ಸುವ್ಯವಸ್ಥೆ ಹಳಿತಪ್ಪಿದೆ ಎನ್ನುವುದಕ್ಕೆ ಇದೇ ಜ್ವಲಂತ ಉದಾಹರಣೆ. ಮಹಿಳೆಯರ ಮೇಲೆ ಅತ್ಯಾಚಾರ ಕೊಲೆಗಳು ನಡೆದಿರುವುದು ಇದೆ ಮೊದಲಲ್ಲ. ಹಿಂದೆ ಹಲವಾರು ಬಾರಿ ಇಂಥ ಘಟನೆಗಳು ನಡೆದಿವೆ. ತಂದೆ-ತಾಯಿ ಹಾಗೂ ಪಾಲಕರು ತಮ್ಮ ಹೆಣ್ಣು ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಳುಹಿಸುವುದು ಕಷ್ಟವಾಗುತ್ತದೆ.
ನಾವೆಲ್ಲರೂ ಜಾಗೃತರಾಗಬೇಕು. ಇಂಥ ದುಷ್ಕೃತ್ಯ ನಡೆದಾಗಲೂ ಕಣ್ಮುಚ್ಚಿ ಕುಳಿತುಕೊಳ್ಳುವುದು ನ್ಯಾಯವಲ್ಲ. ಜಾತಿ, ಮತ, ಪಂಥ ಮರೆತು ಒಗ್ಗಟ್ಟಿನಿಂದ ಖಂಡಿಸಬೇಕು. ಆರೋಪಿಗೆ ಗಲ್ಲು ಶಿಕ್ಷೆಯಾದಾಗ ಮಾತ್ರ ನೇಹಾ ಸಾವಿಗೆ ನ್ಯಾಯ ಸಿಕ್ಕಂತಾಗುತ್ತದೆ ಎಂದು ತಿಳಿಸಿದ್ದಾರೆ. ಸಿದ್ದಪ್ಪ, ಅಮಾತೆಪ್ಪ, ರಮೇಶ್, ಲಕ್ಷ್ಮಣ ಮೌಲಾಲಿ ಇತರರಿದ್ದರು.