ಅಂಜಲಿ ಹತ್ಯೆ ಖಂಡಿಸಿ ಸುರಪುರದಲ್ಲಿ ಪ್ರತಿಭಟನೆ

KannadaprabhaNewsNetwork |  
Published : May 22, 2024, 12:51 AM IST

ಸಾರಾಂಶ

ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ್ ಯುವತಿಯನ್ನು ಹತ್ಯೆ ಮಾಡಿದ ಯುವಕನನ್ನು ಬಂಧಿಸಿ ಗಲ್ಲಿಗೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಕೋಲಿ, ಕಬ್ಬಲಿಗ, ಬೆಸ್ತ ಬುಡಕಟ್ಟು ಹೋರಾಟ ಸಂಘದ ಸದಸ್ಯರು ಸುರಪುರ ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಸುರಪುರ

ಹುಬ್ಬಳ್ಳಿಯಲ್ಲಿ ಕಬ್ಬಲಿಗ ಸಮುದಾಯದ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿ ಯುವಕನನ್ನು ಬಂಧಿಸಿ ಗಲ್ಲಿಗೇರಿಸಬೇಕು ಹಾಗೂ ಯುವತಿಯ ಬಡ ಕುಟುಂಬಕ್ಕೆ ಪರಿಹಾರ ಘೋಷಿಸಬೇಕೆಂದು ಅಖಿಲ ಕರ್ನಾಟಕ ಕೋಲಿ, ಕಬ್ಬಲಿಗ, ಅಂಬಿಗ, ಭೋಯಿ, ಬೆಸ್ತ ಬುಡಕಟ್ಟು ಹೋರಾಟ ಸಂಘದ ಸದಸ್ಯರು ಒತ್ತಾಯಿಸಿ ಶುಕ್ರವಾರ ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿವಿಧ ಮುಖಂಡರು, ಹುಬ್ಬಳ್ಳಿ ನಗರದ ವೀರಾಪುರ ಓಣಿಯಲ್ಲಿರುವ ಮನೆಯೊಳಗೆ ನುಗ್ಗಿ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಬರ್ಬರ ಹತ್ಯೆಗೈದು ಪರಾರಿಯಾಗಿರುವ ಯುವಕನನ್ನು ಕೂಡಲೇ ಬಂಧಿಸಿ ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದರು.

ಕೊಲೆ ಮಾಡಿದ ವ್ಯಕ್ತಿಯನ್ನು ಬಂಧಿಸುವಲ್ಲಿ ವಿಳಂಬ ಧೋರಣೆ ಅನುಸರಿಸಿದರೆ ಸಂಘಟನೆ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು. ಇಂತಹ ಘಟನೆಗಳಿಗೆ ಅವಕಾಶ ನೀಡದೆ ತಕ್ಷಣ ಆರೋಪಿಯನ್ನು ಬಂಧಿಸಿ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿದರು.

ಈ ವೇಳೆ ವಕೀಲ ನಂದಣ್ಣ ಬಾಕ್ಲಿ, ನಗರಸಭೆ ಸದಸ್ಯ ಮಾನಪ್ಪ ಚಳ್ಳಿಗಿಡ, ಸಂತೋಷಕುಮಾರ ಬಾಕ್ಲಿ ದೇವಾಪುರ, ದೊಡ್ಡಪ್ಪ ಮುದನೂರ, ವಿಶ್ವಮಿತ್ರ ಕಟ್ಟಿಮನಿ, ಶಿವಪ್ಪ ಕಟ್ಟಿಮನಿ, ಮರೆಪ್ಪ ವೆಂಕಟಪುರ, ವೆಂಕಟೇಶ ಪೋತ್ಲಕರ, ತಾಲೂಕು ಅಧ್ಯಕ್ಷ ದೇವಿಂದ್ರಪ್ಪಗೌಡ, ಪಾರಪ್ಪ, ವೆಂಕಟರೆಡ್ಡಿ ಭೋವಿಗಲ್ಲಿ, ದರ್ಶನ, ಭಾಗೇಶ, ಪ್ರಶಾಂತ, ಆನಂದ, ಯಲ್ಲಪ್ಪ, ವೆಂಕೋಬ ರತ್ತಾಳ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರದ 75 ಜಂಕ್ಷನ್‌ ಅಭಿವೃದ್ಧಿಗೆ ಗ್ರಹಣ!
ಎಚ್‌ಎಎಲ್‌ ಮತ್ತೆ ಸಾರ್ವಜನಿಕ ಬಳಕೆ ಪ್ರಸ್ತಾಪ ಪರಿಶೀಲನೆ:ಸಚಿವ