ರಾಣಿಬೆನ್ನೂರು: ತಾಲೂಕಿನ ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯ ಎರಡನೇ ಮಹಡಿ ಕಟ್ಟಡ ಕಾಮಗಾರಿಯಲ್ಲಿ ನಡೆದಿರುವ ಭ್ರಷ್ಟಾಚಾರ ಮತ್ತು ಕಾರ್ಮಿಕರಿಗೆ ವೇತನ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸೋಮವಾರ ಕೃಷಿ ಮಹಾವಿದ್ಯಾಲಯ ಬಳಿ ಪ್ರತಿಭಟನೆ ನಡೆಸಲಾಯಿತು. ರೈತ ಸಂಘದ ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ಕೃಷಿ ಮಹಾವಿದ್ಯಾಲಯದ ಎರಡನೇ ಮಹಡಿ ಕಟ್ಟಡ ಕಾಮಗಾರಿ ಟೆಂಡರ್ ಬೆಂಗಳೂರಿನ ಬಾಲಾಜಿ ಪ್ರೊಜೆಕ್ಟ್ ಪ್ರೈವೆಟ್ ಲಿಮಿಡೆಟ್ ಕಂಪನಿಗೆ ಲಭಿಸಿದ್ದು, ಇದಕ್ಕಾಗಿ ಸರ್ಕಾರ ಅವರಿಗೆ 2023- 24ನೇ ಸಾಲಿನಲ್ಲಿ ₹10 ಕೋಟಿ ಹಣವನ್ನು ಬಿಡುಗಡೆ ಮಾಡಿತ್ತು.
ಇದೀಗ ಅಲ್ಲಿ ಎಲ್ಲ ಕೆಲಸಗಳು ಮುಗಿದಿದ್ದು, ಒಂದು ವಾರದ ಅವಧಿಯ ಕೆಲಸ ಮಾತ್ರ ಬಾಕಿ ಉಳಿದಿದೆ. ಆರೋಗ್ಯ ಇಲಾಖೆ ಎಂಜಿನಿಯರ್ ಅಜಿತ್ ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯ ಮತ್ತು ಗೆಸ್ಟ್ ಹೌಸ್ ಕಟ್ಟಲು ಸತತ 2 ವರ್ಷ ಕಾರ್ಮಿಕರನ್ನು ಬಳಕೆ ಮಾಡಿಕೊಂಡು ಮೋಸ ಮಾಡಿ ಹಣ ಕೊಡದೆ ಸತಾಯಿಸಿದ್ದಾರೆ ಎಂದು ಆರೋಪಿಸಿದರು.
ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಕರೆಯಿಸಿ ಸಮಸ್ಯೆಯನ್ನು ಸರಿಪಡಿಸಬೇಕು. ಇಲ್ಲವಾದರೆ ಏ. 28ರಿಂದ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.ಬಸೀರ್ಅಹ್ಮದ್ ಸೈಯ್ಯದ್, ಶಿವಪುತ್ರಪ್ಪ ಮೆಡ್ಲೇರಿ, ಮಂಜುನಾಥ ಗುಡ್ಡಣ್ಣನವರ, ರಾಜೇಶ ಅಂಗಡಿ, ಮಂಜುನಾಥ ಸಂಬೋಜಿ, ಅನೀರ್ ರಾಯಚೂರ, ಪ್ರಭುದೇವ ಕದರಮಂಡಲಗಿ, ಎ.ಬಿ. ಮಂಜಪ್ಪ, ಸುನೀಲ ಕೊಳ್ಳಿ, ಪರಸಪ್ಪ ಕಕ್ಕರಗೊಳ, ಮಾಲತೇಶ ದೊಡ್ಮನಿ, ವಿರೂಪಾಕ್ಷಪ್ಪ ಜಿ., ಪ್ರಕಾಶ ಕೂನಬೇವ, ರಾಜು ಬಿದರಿ, ಲಲಿತಾ ಲಮಾಣಿ, ಲಕ್ಷ್ಮವ್ವ ಲಮಾಣಿ, ರೇಣುಕಾ ಮುದ್ದಿ, ಪ್ರದೀಪ ಬಳ್ಳಾರಿ ಮತ್ತಿತರರಿದ್ದರು.ಜಾತ್ರೆ ಪ್ರಯುಕ್ತ ರಕ್ತದಾನ, ಕಬಡ್ಡಿ ಪಂದ್ಯಾವಳಿ
ಈ ಸಂದರ್ಭದಲ್ಲಿ ಶ್ರೀಕಾಂತಗೌಡ ದುಂಡಿಗೌಡ್ರ, ಶಂಕರಗೌಡ ಪೊಲೀಸಗೌಡ್ರ, ಶಿದ್ದನಗೌಡ ಪೊಲೀಸಗೌಡ್ರ, ಗಂಗನಗೌಡ ಪೊಲೀಸಗೌಡ್ರ, ಬಸಪ್ಪ ನೀಲಪ್ಪ ಕುಲಕರ್ಣಿ, ಚನ್ನವೀರಗೌಡ ಪೊಲೀಸಪಾಟೀಲ, ಗೋಪಾಲಗೌಡ ಹೊನ್ನಗೌಡ್ರ, ಮೇಘರಾಜಗೌಡ ಪೊಲೀಸಗೌಡ್ರ, ತ್ರಿಲೋಕನಗೌಡ ಪಾಟೀಲ, ಶಂಕರಗೌಡ ಪೊಲೀಸಗೌಡ್ರ, ಅಭಿ ಹೊನ್ನಪ್ಪನವರ, ಮುತ್ತಪ್ಪ ಭಜಂತ್ರಿ ಸೇರಿದಂತೆ ಗ್ರಾಮಸ್ಥರು ಇದ್ದರು.