ಕನ್ನಡಪ್ರಭ ವಾರ್ತೆ ಉಡುಪಿ
ಸೆಸ್ ಕಾಯಿದೆ 1996 ಮತ್ತು ಅಂತರರಾಜ್ಯ ವಲಸೆ ಕಾರ್ಮಿಕರ ಕಾಯಿದೆ 1976ಗಳನ್ನು ಉಳಿಸುವಂತೆ, ಕಟ್ಟಡ ಕಾರ್ಮಿಕ ಕೇಂದ್ರ ಸಲಹಾ ಸಮಿತಿ ಮತ್ತೆ ಆರಂಭಿಸುವಂತೆ, ಕಾರ್ಮಿಕ ಕಲ್ಯಾಣ ನಿಧಿಯನ್ನು ಬೇರೆ ಉದ್ದೇಶಗಳಿಗೆ ಬಳಸದಂತೆ, ಕಾರ್ಮಿಕ ಕಲ್ಯಾಣ ಮಂಡಳಿಗಳಲ್ಲಿ ಕಾರ್ಮಿಕ ಸಂಘಟನೆಗಳಿಗೆ ಪ್ರಾತನಿಧ್ಯ ನೀಡುವುದು ಮತ್ತಿತರ ಬೇಡಿಕೆ ಮುಂದಿರಿಸಿ ಪ್ರತಿಭಟನೆ ನಡೆಯಿತು.
ರಾಜ್ಯಾದ್ಯಂತ ಅಖಿಲ ಭಾರತ ಮಟ್ಟದ 11 ಮತ್ತು ರಾಜ್ಯ ಮಟ್ಟದ 11 ಬೇಡಿಕೆ ಮುಂದಿಟ್ಡು ಹೋರಾಟ ಪ್ರತಿಭಟನೆ ಗೆ ಕರೆ ನೀಡಿದ್ದು ಉಡುಪಿಯಲ್ಲಿ ಕಟ್ಟಡ ಸಂಘದ ನೇತೃತ್ವದಲ್ಲಿ ರಾಜ್ಯ ದ ಬೇಡಿಕೆಗಳ ಜೊತೆ ಉಡುಪಿ ಜಿಲ್ಲೆಯ ಎರಡು ಬೇಡಿಕೆಗಳೊಂದಿಗೆ ಪ್ರತಿಭಟನೆ ಮಾಡಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಮುಖಾಂತರ ರಾಜ್ಯದ ಮುಖ್ಯಮಂತ್ರಿಗೆ ಮನವಿ ನೀಡಲಾಯಿತು. ಈ ಸಂದರ್ಭ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.ಪ್ರತಿಭಟನೆಯಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ರಾಜ್ಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಸಭೆ ಉದ್ಘಾಟಿಸಿ ಮಾತನಾಡಿದರು, ಜಿಲ್ಲಾ ಕಾರ್ಯದರ್ಶಿ ಶಶಿಧರ ಗೋಲ್ಲ ಪ್ರಸ್ತಾವಿಕವಾಗಿ ಮಾತನಾಡಿದರು.