ಮೇಕೆದಾಟು ಯೋಜನೆ ಆರಂಭಕ್ಕೆ ಆಗ್ರಹಿಸಿ ಜ.9ಕ್ಕೆ ಪ್ರತಿಭಟನೆ

KannadaprabhaNewsNetwork |  
Published : Jan 06, 2026, 01:45 AM IST
ಮೇಕೆದಾಟು ಯೋಜನೆ ಆರಂಭಕ್ಕೆ ಆಗ್ರಹಿಸಿ ಜ.9ಕ್ಕೆ ಪ್ರತಿಭಟನೆ | Kannada Prabha

ಸಾರಾಂಶ

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ, ಕನ್ನಡ ಶಾಲೆಗಳನ್ನು ಮುಚ್ಚದಂತೆ ಹಾಗೂ ಮೇಕೆದಾಟು ಯೋಜನೆ ಶೀಘ್ರವಾಗಿ ಪ್ರಾರಂಭಿಸುವಂತೆ ಆಗ್ರಹಿಸಿ ಜನವರಿ ೯ರಂದು ಚನ್ನಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ, ಕನ್ನಡ ಶಾಲೆಗಳನ್ನು ಮುಚ್ಚದಂತೆ ಹಾಗೂ ಮೇಕೆದಾಟು ಯೋಜನೆ ಶೀಘ್ರವಾಗಿ ಪ್ರಾರಂಭಿಸುವಂತೆ ಆಗ್ರಹಿಸಿ ಜನವರಿ ೯ರಂದು ಚನ್ನಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿದೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ. ಉಮಾಶಂಕರ ತಿಳಿಸಿದರು.

ಪಟ್ಟಣದ ವೇದಿಕೆ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಪ್ರಮುಖ ಇಲಾಖೆಗಳಲ್ಲಿ 3.80 ಲಕ್ಷ ಹುದ್ದೆಗಳು ಖಾಲಿ ಇವೆ, ಕೃಷಿ ಇಲಾಖೆ 6876, ಪಶುಸಂಗೋಪನೆ 11020, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 8526, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ 6190, ಹಣಕಾಸು ಇಲಾಖೆ 7668, ಮೀನುಗಾರಿಕೆ 838 ಆಹಾರ ಮತ್ತು ನಾಗರಿಕ ಪೂರೈಕೆ 1442, ಅರಣ್ಯ 6478 ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ 37,572, ಉನ್ನತ ಶಿಕ್ಷಣ 13599, ಕಂದಾಯ 10867 ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ 10504, ಪರಿಶಿಷ್ಟ ಜಾತಿ ಕಲ್ಯಾಣ 9646 ಶಿಕ್ಷಣ 79,694 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 3391 ಹುದ್ದೆಗಳು ಖಾಲಿ ಇದ್ದು ನಾಡಿನಲ್ಲಿ ನಿರುದ್ಯೋಗ ಸಮಸ್ಯೆಗಳು ಹೆಚ್ಚಾಗಲು ಕಾರಣ ನಮ್ಮನಾಳುತ್ತಿರುವ ಸರ್ಕಾರಗಳೇ ಕಾರಣವಾಗಿದೆ ಎಂದು ಆರೋಪಿಸಿದರು.

ಅದೆಷ್ಟೋ ಕುಟುಂಬಗಳು ತಮ್ಮ ಮಕ್ಕಳುಗಳನ್ನು ಕೂಲಿ ನಾಲಿ ಮಾಡಿ ವಿದ್ಯಾವಂತ ಪದವೀಧರರನ್ನಾಗಿ ಮಾಡಿ ಎಲ್ಲೋ ಒಂದು ಕಡೆ ನಮ್ಮ ಮಕ್ಕಳಿಗೆ ಸರ್ಕಾರಿ ಉದ್ಯೋಗ ಸಿಗುತ್ತದೆ ಎಂಬ ಆಶೆಗೆ ಬಹುದೊಡ್ಡ ತಣ್ಣೀರೆರಚಿದಂತಾಗಿದೆ.

ಈ ಹಿಂದೆ ಸರ್ಕಾರಗಳು ಇಲಾಖೆಗಳಲ್ಲಿ ಉದ್ಯೋಗ ಮಾಡುತ್ತಿರುವ ನೌಕರರು ನಿವೃತ್ತಿಯಾದ ಕೆಲ ದಿನಗಳಲ್ಲಿ ಭರ್ತಿ ಮಾಡುತ್ತಿದ್ದರು ಆದರೆ, ಪ್ರಸ್ತುತ ಸಂದರ್ಭ ತಾತ್ಕಾಲಿಕ ಉದ್ಯೋಗಿಗಳನ್ನು ನಿಯೋಜಿತ ಸ್ಥಳಕ್ಕೆ ಹಾಕಿ ಕಡಿಮೆ ಸಂಬಳಕ್ಕೆ ದುಡಿಸಿಕೊಳ್ಳುತ್ತಿರುವ ಉದಾಹರಣೆಗಳು ಉಂಟು. ಹಾಗಾಗಿ ಸರ್ಕಾರಗಳು ನಾಡಿನಲ್ಲಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸುತ್ತೇವೆ ಎಂದರು.

ಗೋಷ್ಠಿಯಲ್ಲಿ ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ.ಲಿಂಗರಾಜು, ಜಿಲ್ಲಾ ಉಪಾಧ್ಯಕ್ಷ ಮಹಾಲಿಂಗು, ತಾಲೂಕು ಪ್ರಧಾನ ಕಾರ್ಯದರ್ಶಿ ಸೋಂಪುರ ಉಮೇಶ್, ಸಂಘಟನಾ ಕಾರ್ಯದರ್ಶಿ ಉಮೇಶ್, ಗೌರವಾಧ್ಯಕ್ಷರಾದ ವಿ.ಎಚ್.ಶಿವಲಿಂಗಯ್ಯ,ಆಲೂರು ಚೆನ್ನಪ್ಪ, ಯುವ ಘಟಕದ ಅಧ್ಯಕ್ಷ ವಿಶ್ವಾಸ್, ಪಟೇಲ್ ಹರೀಶ್, ಎಂ.ವೀರಪ್, ನಿವೃತ್ತ ಶಿಕ್ಷಕ ನಾರಾಯಣ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ