ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು. ಜಿಲ್ಲೆಯಲ್ಲಿ 3 ಲಕ್ಷಕ್ಕಿಂತಲೂ ಹೆಚ್ಚು ಕಾರ್ಮಿಕರು ಬಾಡಿಗೆ ಮನೆ,
ತೋಟದ ಲೈನ್ಮನೆ, ಅಪಾಯಕಾರಿಯಾಗಿರುವ ನದಿ ದಡ,ಬೆಟ್ಟಗುಡ್ಡಗಳ ಮೇಲೆ ಮನೆ ನಿರ್ಮಿಸಿ ಸಂಕಷ್ಟದ ಬದುಕು ನಡೆಸುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಇರುವ ಆದಿವಾಸಿ, ದಲಿತ ಸಮುದಾಯಗಳು, ಅಲ್ಪಸಂಖ್ಯಾತರು ಸೇರಿದಂತೆ ಬಡ ಕುಟುಂಬಗಳು ಸ್ವಂತ ಮನೆ, ನಿವೇಶನಕ್ಕಾಗಿ ಹೋರಾಟ ನಡೆಸುತ್ತಲೇ ಬಂದಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರ ಉಳ್ಳವರ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ನ್ನು ಅಧಿಕಾರಕ್ಕೆ ತರಲಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರ ತೆಗೆದುಕೊಂಡ ನಿರ್ಧಾರದಂತೆ ಉಳ್ಳವರಿಗೆ ಗುತ್ತಿಗೆ ಆಧಾರದಲ್ಲಿ ಜಮೀನನ್ನು ನೀಡಲು ಮುಂದಾಗಿದೆ. ಇದರಿಂದ ಕಡು ಬಡತನದಲ್ಲಿರುವ ಆದಿವಾಸಿ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ವಂಚನೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಯದರ್ಶಿ ಎ.ಸಿ.ಸಾಬು ಮಾತನಾಡಿ, ರಾಜ್ಯದಲ್ಲಿ ಸರ್ಕಾರ ಬದಲಾಗಿದೆ, ಆದರೆ ವಿಚಾರಗಳು, ವ್ಯವಸ್ಥೆಗಳು ಬದಲಾಗಿಲ್ಲ. ಅಧಿಕಾರಕ್ಕೆ ಬಂದರೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡುತ್ತಾರೆ. ಆದಿವಾಸಿಗಳ
ಸಿಐಟಿಯು ಖಜಾಂಚಿ ಎನ್.ಡಿ.ಕುಟ್ಟಪ್ಪನ್, ಸಹ ಕಾರ್ಯದರ್ಶಿಗಳಾದ ಕೆ.ಎಸ್.ಶಾಜಿ ರಮೇಶ್, ಕೆ.ಕೆ.ಹರಿದಾಸ್ ಸುದ್ದಿಗೋಷ್ಠಿಯಲ್ಲಿದ್ದರು.