ಅಂಬೇಡ್ಕರ್‌ಗೆ ಚಿತ್ರಕ್ಕೆ ಅವಮಾನ: ಪ್ರತಿಭಟನೆ

KannadaprabhaNewsNetwork |  
Published : Oct 11, 2025, 01:00 AM IST
10ಸಿಡಿಎನ್01 | Kannada Prabha

ಸಾರಾಂಶ

ಚಡಚಣ: ಸಾಮಾಜಿಕ ಜಾಲತಾಣದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಶೂ ಚಿತ್ರ ತೋರಿಸಿ ಪ್ರತಿಕ್ರಿಯಿಸಿದ್ದ ಅವಮಾನಿಸಿದ ವ್ಯಕ್ತಿಯ ಮನೆ ಮುಂದೆ ಟೈರ್‌ಗೆ ಬೆಂಕಿ ಹಚ್ಚಿ ಅಹೋರಾತ್ರಿ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಜಿಗಜೇವಣಿ ಗ್ರಾಮದಲ್ಲಿ ಗುರುವಾರ ನಡೆಯಿತು.

ಚಡಚಣ: ಸಾಮಾಜಿಕ ಜಾಲತಾಣದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಶೂ ಚಿತ್ರ ತೋರಿಸಿ ಪ್ರತಿಕ್ರಿಯಿಸಿದ್ದ ಅವಮಾನಿಸಿದ ವ್ಯಕ್ತಿಯ ಮನೆ ಮುಂದೆ ಟೈರ್‌ಗೆ ಬೆಂಕಿ ಹಚ್ಚಿ ಅಹೋರಾತ್ರಿ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಜಿಗಜೇವಣಿ ಗ್ರಾಮದಲ್ಲಿ ಗುರುವಾರ ನಡೆಯಿತು.

ಗುರುವಾರ ವಾಟ್ಸಪ್ ಗ್ರೂಪ್‌ವೊಂದರಲ್ಲಿ ಅಂಬೇಡ್ಕರ್‌ ಭಾವಚಿತ್ರ ಬಿತ್ತರಿಸಲಾಗಿತ್ತು. ಅದಕ್ಕೆ ಜಿಗಜೇವಣಿ ಗ್ರಾಮದ ಸಿದ್ದಪ್ಪ ಕುಂಬಾರ ಎಂಬ ಯುವಕನೋರ್ವ ಶೂ ಚಿತ್ರ ತೋರಿಸಿ ಪ್ರತಿಕ್ರಿಯೆ ನೀಡಿದ್ದ. ಈ ಹಿನ್ನಲೆಯಲ್ಲಿ ಜಿಗಜೇವಣಿ ಗ್ರಾಮ ಸೇರಿದಂತೆ ಸುತ್ತಲಿನ ಗ್ರಾಮಗಳ ದಲಿತ ಸಂಘಟನೆಗಳ ಕಾರ್ಯಕರ್ತರಿ ಅವಮಾನಿಸಿದ್ದ ವ್ಯಕ್ತಿಯ ಮನೆ ಮುಂದೆ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಜಿಗಜೇವಣಿ ಗ್ರಾಮದ ಸಿದ್ದಪ್ಪ ಕುಂಬಾರ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದ ಬಗ್ಗೆ ಚಡಚಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ : ಸಿಎಂ ಸಿದ್ದರಾಮಯ್ಯ
ಸಿಎಂ ರೇಸಲ್ಲಿ ಡಿಕೆ ಒಬ್ಬರೇ ಇಲ್ಲ : ರಾಜಣ್ಣ