ಜಮೀರ್‌ ಅಹ್ಮದ್ ಖಾನ್‌ ಗೆ ಸಚಿವ ಸ್ಥಾನ ನೀಡುವಂತೆ ಪ್ರತಿಭಟನೆ

KannadaprabhaNewsNetwork |  
Published : Jun 06, 2026, 02:15 AM IST
ಪೋಟೊ5ಕೆಎಸಟಿ5: ಶಾಸಕ  ಜಮೀರ್‌ ಅಹ್ಮದ್ ಖಾನ್‌ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಕುಷ್ಟಗಿ ಪಟ್ಟಣದಲ್ಲಿ ಮುಸ್ಲೀಂ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಕಾಂಗ್ರೆಸ್ ಕಟ್ಟಾಳು ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿದ್ದ ಜಮೀರ್ ಅಹ್ಮದ್ ಖಾನ್ ಅವರನ್ನು ರಾಜಕೀಯವಾಗಿ ಹತ್ತಿಕ್ಕುವ ಹುನ್ನಾರ

ಕುಷ್ಟಗಿ: ಶಾಸಕ ಜಮೀರ್‌ ಅಹ್ಮದ್ ಖಾನ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಕುಷ್ಟಗಿ ಪಟ್ಟಣದಲ್ಲಿ ಮುಸ್ಲೀಂ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಮಾತನಾಡಿ, ಜಮೀರ್‌ ಅಹ್ಮದ್ ಖಾನ್‌ ಪಕ್ಷದ ಸಂಘಟನೆ ಮತ್ತು ಜನಸೇವೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಧ್ವನಿಯಾಗಿ ಕಾರ್ಯ ನಿರ್ವಹಿಸಿರುವ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ನ್ಯಾಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಕಟ್ಟಾಳು ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿದ್ದ ಜಮೀರ್ ಅಹ್ಮದ್ ಖಾನ್ ಅವರನ್ನು ರಾಜಕೀಯವಾಗಿ ಹತ್ತಿಕ್ಕುವ ಹುನ್ನಾರ ನಡೆದಿದ್ದು, ಅವರಿಗೆ ಸಚಿವ ಸ್ಥಾನ ನೀಡಿ ಮುಸ್ಲಿಂ ಸಮುದಾಯದ ನಾಯಕತ್ವಕ್ಕೆ ಬೆಲೆ ನೀಡಬೇಕು ಎಂದು ಹೇಳಿದರು.

ಈ ಪ್ರತಿಭಟನೆ ಪಟ್ಟಣದ ಮಲ್ಲಯ್ಯ ವೃತ್ತದಿಂದ ಆರಂಭವಾಗಿ ಬಸ್ ನಿಲ್ದಾಣ ರಸ್ತೆ ಮೂಲಕ ಮಾರುತಿ ವೃತ್ತದ ಮಾರ್ಗವಾಗಿ ಬಸವೇಶ್ವರ ವೃತ್ತದಲ್ಲಿ ಸೇರಿ ಆಕ್ರೋಶ ಹೊರಹಾಕಿದ ಅವರು, ಜಮೀರ್ ಅಹ್ಮದ್ ಖಾನ್‌ ಅವರನ್ನು ಸಚಿವ ಸಂಪುಟದಲ್ಲಿ ತೆಗೆದುಕೊಳ್ಳದೆ ಇದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವದು ಎಂದು ಕಾಂಗ್ರೆಸ್ ವರಿಷ್ಟರಿಗೆ ಎಚ್ಚರಿಕೆ ನೀಡುವ ಮೂಲಕ ಎಲ್ಲರೂ ಜಮೀರ ಪರ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮುಸ್ಲೀಂ ಸಮುದಾಯದ ಮುಖಂಡ ಅಬ್ದುಲ್‌ ನಯಿಂ, ಶೇಖ್‌ ನಿಜಾಮುದ್ದೀನ ಕಪಾಲಿ, ಸದ್ದಾಂ ಹುಸೇನ, ಅಕ್ಬರ್ ಮಾಟಲದಿನ್ನಿ, ಮೌಲಾ ಗುಮಗೇರಿ, ರಜಾಕ ಸುಳ್ಳದ, ಹುಸೇನ ನದಾಫ್, ಮೈನುದ್ದೀನ ವಕೀಲರು, ಶಪೀ ವಕೀಲರು, ಅಬ್ದುಲ್ ಟೆಂಗುಂಟಿ, ಯೂಸುಫ್ ಕನಕಾಪೂರ, ರಿಯಾಜ್, ಹುಸೇನ ಕಾಯಿಗಡ್ಡಿ ಸೇರಿದಂತೆ ಅನೇಕರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಷ್ಟಗಿ ಹಸಿರು ನಗರವನ್ನಾಗಿ ಮಾಡಲು ಪಣ ತೊಡಿ
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರ ಮೇಲೆ ಮುನಿಸು, ಬೇರೆ ಶಾಲೆ ಹೊರಟ ವಿದ್ಯಾರ್ಥಿಗಳು