ಗದಗ: ಬಾದಾಮಿ ತಾಲೂಕಿನ ಉಗಳವಾಟ ಗ್ರಾಮದಲ್ಲಿ ಕುರಿಗಾಹಿಯ ಹತ್ಯೆ ಮಾಡಿರುವದು, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದ ನಮ್ಮ ಸಮಾಜದ ಮಹಿಳಾ ಪಿಡಿಒ ಮೇಲೆ ಹಲ್ಲೆ ಮತ್ತು ಕಲಬುರಗಿ ಜಿಲ್ಲೆಯ ಅಳಂದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಕುರುಬರಿಗೆ ಬಹಿಷ್ಕಾರ ಹಾಕಿರುವುದನ್ನು ಖಂಡಿಸಿ ಜಿಲ್ಲೆಯ ಕುರುಬ ಸಮುದಾಯದ ವಿವಿಧ ಸಂಘಟನೆಗಳು ಹಾಗೂ ಜಿಲ್ಲಾ ಕುರಿಗಾರರ ಸಹಕಾರಿ ಸಂಘಗಳ ಒಕ್ಕೂಟದ ವತಿಯಿಂದ ಗುರುವಾರ ಭಾರೀ ಸಂಖ್ಯೆಯ ಕುರಿಗಳೊಂದಿಗೆ ಆಗಮಿಸಿ, ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಸರ್ಕಾರ ಬಜೆಟ್ನಲ್ಲಿ ಕುರಿಗಾರರಿಗೆ ಘೋಷಣೆಗಳನ್ನು ಮಾಡುತ್ತಿವೆಯಾದರೂ ಕುರಿಗಾರರಿಗೆ ಅನುಕೂಲಗಳು ಮರೀಚಿಕೆಯಾಗಿವೆ. ಸರ್ಕಾರ ಕಾಯಿದೆಗಳನ್ನು ಮಾಡಿವೆ. ಬಂದೂಕು ಲೈಸೆನ್ಸ್ ಬಗ್ಗೆ ಘೋಷಣೆ ಮಾಡಿದೆ. ಆದರೆ ಯಾವುದೂ ಸಹ ಕಾರ್ಯರೂಪಕ್ಕೆ ಬರುತ್ತಿಲ್ಲ. ಕುರಿಗಾಹಿಗಳು ದೇಶದ ಆವಿಭಾಜ್ಯ ಅಂಗವಾಗಿದ್ದು, ಅವರ ಜೀವನೋಪಾಯ ಮತ್ತು ಸುರಕ್ಷತೆಗೆ ರಾಜ್ಯ ಸರ್ಕಾರದ ತುರ್ತು ಗಮನ ನೀಡಬೇಕಿದೆ ಎಂದು ಆಗ್ರಹಿಸಿದರು.
ಸರಕಾರ ಕುರಿಗಾರನ ಹತ್ಯೆ ಸೇರಿದಂತೆ ಎಲ್ಲಾ ಹಿಂಸಾತ್ಮಕ ಘಟನೆಗಳಿಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಪೊಲೀಸ್ ಪೆಟ್ರೋಲಿಂಗ್ ಹೆಚ್ಚಿಸಿ, ಕುರಿಗಾಹಿಗಳಿಗೆ ವಿಶೇಷ ರಕ್ಷಣೆ ಒದಗಿಸಬೇಕು. ಹತ್ಯೆಗೀಡಾದ ಕುರಿಗಾರರನ ಕುಟುಂಬಕ್ಕೆ ಆರ್ಥಿಕ ಪರಿಹಾರ ನೀಡಬೇಕು ಮತ್ತು ಕುರಿಗಾರರಿಗೆ ಬಂದೂಕು ತರಬೇತಿ ನೀಡಿ, ಲೈಸೆನ್ಸ್ ನೀಡುವ ಪ್ರಕ್ರಿಯೆ ಸರಳೀಕೃತಗೊಳಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕುರುಬ ಸಮಾಜದ ಹಿರಿಯರಾದ ಫಕೀರಪ್ಪ ಹೆಬಸೂರ, ರುದ್ರಣ್ಣ ಗುಳಗುಳಿ, ವಾಸಣ್ಣ ಕುರಡಗಿ, ರವಿ ದಂಡಿನ, ಹೇಮಂತ ಗಿಡ್ಡಹನುಮಣ್ಣವರ, ಮಂಜು ಜಡಿ, ಮುತ್ತು ಜಡಿ, ಬಸವರಾಜ ಕುರಿ, ಉಮೇಶ ಪೂಜಾರ, ರವಿ ಜೋಗಿನ, ಮಲ್ಲೇಶಪ್ಪ ಕೊಣ್ಣೂರ, ಮುತ್ತಪ್ಪ ಕುರಿ, ಕುಮಾರ ಮಾರನಬಸರಿ, ಬಸಪ್ಪ ಶಿರೂರ, ನಾರಾಯಣ ಜಡಿ, ದೇವಪ್ಪ ಮಲ್ಲಸಮುದ್ರ, ಬಸವರಾಜ ಜಡಿ, ಬರಮಲಿಂಗಪ್ಪ ಬಿಂಗಿ, ಸೋಮು ಮೇಟಿ, ಬಸವರಾಜ ಅಣ್ಣಿಗೇರಿ, ಚೆನ್ನಮ್ಮ ಹುಳಕಣ್ಣವರ, ರೇಖಾ ಜಡಿಯವರು, ಸುರೇಖಾ ಕುರಿ, ಬಾಳಮ್ಮ ಶಿವಾನಂದಮಠ, ಭಾಗ್ಯಶ್ರೀ ಬಾಬಣ್ಣ, ನಾಗಪ್ಪ ಗುಗ್ಗರಿ, ನೀಲಪ್ಪ ಗಡ್ಡಣ್ಣನವರ, ಉಮೇಶ ಜೋಳದ, ಹನುಮಂತಪ್ಪ ಮುಂಡರಗಿ, ಮಾರುತಿ ಜಡಿಯವರ, ಸುರೇಶ ಮಾಳಗಿಮನಿ, ರಾಜು ಪವರ, ಉಮೇಶ ಜೋಳದ, ಹನುಮಂತ ಗಿಡ್ಡಹನಮಣ್ಣವರ, ಸತೀಶ ಗಿಡ್ಡಹನಮಣ್ಣವರ, ಶೇಖರಪ್ಪ ಚನ್ನಳ್ಳಿ, ಫಕೀರೇಶ ಪೂಜಾರ, ಕುಶಾಲ ದೇವರಮನಿ, ಮಲ್ಲೇಶ ಬಡಿಗೇರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.