ಆಡಳಿತರೂಢ ಪಕ್ಷದ ಸದಸ್ಯರಿಂದಲೇ ಪ್ರತಿಭಟನೆ

KannadaprabhaNewsNetwork |  
Published : Apr 10, 2025, 01:01 AM IST
ಕುಡಿಯುವ ನೀರಿನ ಸಮಸ್ಯೆ ಉಲ್ಬಣ, ಯುಜಿಡಿ ಕಾಮಗಾರಿ ನಿರ್ಲಕ್ಷ್ಯದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬುಧವಾರ ಭದ್ರಾವತಿ ನಗರಸಭೆಯಲ್ಲಿ ನಡೆದ ಸಭೆಯಲ್ಲಿ ಆಡಳಿತ ರೂಢ ಪಕ್ಷದ ಸದಸ್ಯರೇ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಅದರಲ್ಲೂ ಸದಸ್ಯೆ ಲತಾ ಚಂದ್ರಶೇಖರ್ ಬಳೆ ತೋರಿಸಿ ಆಕ್ರೋಶ ಹೊರ ಹಾಕಿದರು. | Kannada Prabha

ಸಾರಾಂಶ

ಭದ್ರಾವತಿ: ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಅಲ್ಲದೆ ವಾರ್ಡ್‌ಗಳಲ್ಲಿ ಚರಂಡಿ, ರಸ್ತೆ ಸೇರಿದಂತೆ ಯುಜಿಡಿ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸದೆ ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆಂದು ಆಡಳಿತ ರೂಢ ಪಕ್ಷದ ಸದಸ್ಯರೇ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಭದ್ರಾವತಿ: ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಅಲ್ಲದೆ ವಾರ್ಡ್‌ಗಳಲ್ಲಿ ಚರಂಡಿ, ರಸ್ತೆ ಸೇರಿದಂತೆ ಯುಜಿಡಿ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸದೆ ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆಂದು ಆಡಳಿತ ರೂಢ ಪಕ್ಷದ ಸದಸ್ಯರೇ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಆರಂಭದಲ್ಲಿ ಆಡಳಿತರೂಢ ಪಕ್ಷದ ಸದಸ್ಯರಾದ ಆರ್.ಶ್ರೇಯಸ್, ಜಾರ್ಜ್ ಮತ್ತು ಪಕ್ಷೇತರ ಸದಸ್ಯ ಆರ್.ಮೋಹನ್ ಕುಮಾರ್ ಸಭೆಯ ಬಾವಿಗಿಳಿದು ಪ್ರತಿಭಟಿಸುವ ಮೂಲಕ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ಅಭಿಯಂತರರಾದ ಶಿವಪ್ರಸಾದ್ ಹಾಗೂ ಪ್ರಸಾದ್ ಮತ್ತು ಸಂತೋಷ್ ಪಾಟೀಲ್ ಸೇರಿದಂತೆ ಇನ್ನಿತರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿರುವ ಕುರಿತು ಮಾಹಿತಿ ನೀಡಿದರೂ ಯಾರು ಗಮನ ಹರಿಸುತ್ತಿಲ್ಲ. ಇದರಿಂದಾಗಿ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ತಕ್ಷಣ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.

ಈ ನಡುವೆ ಅಧಿಕಾರಿಗಳು ಸಮಜಾಯಿಷಿ ನೀಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಸದಸ್ಯರಾದ ಬಿ.ಕೆ.ಮೋಹನ್, ಬಿ.ಟಿ.ನಾಗರಾಜ್, ಚನ್ನಪ್ಪ, ವಿ.ಕದಿರೇಶ್, ಟಿಪ್ಪುಸುಲ್ತಾನ್, ಕೆ.ಸುದೀಪ್ ಕುಮಾರ್ ಸೇರಿದಂತೆ ಇನ್ನಿತರ ಸದಸ್ಯರು ಸುಮಾರು ಅರ್ಧ ತಾಸು ಅಧಿಕಾರಿಗಳ ವರ್ತನೆ ಹಾಗೂ ವಾರ್ಡ್‌ಗಳಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು.

ಈ ವೇಳೆ ಪೌರಾಯುಕ್ತ ಪ್ರಕಾಶ್ ಎಂ.ಚನ್ನಪ್ಪನವರ್ ಮಾತನಾಡಿ, ೧ ವಾರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಜೊತೆಗೆ ವಾರ್ಡ್‌ಗಳಲ್ಲಿ ಚರಂಡಿ, ರಸ್ತೆ ಸೇರಿದಂತೆ ಯುಜಿಡಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಪೂರ್ಣಗೊಳಿಸುವಲ್ಲಿ ನಿರ್ಲಕ್ಷ್ಯತನವಹಿಸಿದ್ದಾರೆ. ಅವರಿಗೆ ಕಾಮಗಾರಿ ನಡೆಸಲು ಸಾಧ್ಯವಾಗದಿದ್ದರೆ ಕೈಗಳಿಗೆ ಬಳೆ ಧರಿಸಿಕೊಂಡು ಇರಲಿ ಎಂದು ಸದಸ್ಯೆ ಲತಾ ಚಂದ್ರಶೇಖರ್ ಬಳೆ ಪ್ರದರ್ಶಿಸುವ ಮೂಲಕ ಆಕ್ರೋಶ ಹೊರ ಹಾಕಿದರು.

ಸುಮಾರು ೬ ತಿಂಗಳಿಂದ ಕಾಮಗಾರಿ ಸ್ಥಗಿತಗೊಂಡಿದೆ. ವಾರ್ಡ್‌ಗಳ ನಿವಾಸಿಗಳು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ. ಕಾಮಗಾರಿ ತಕ್ಷಣ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಹಲವು ಬಾರಿ ಮನವಿ ಮಾಡಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಅಳಲು ತೋರ್ಪಡಿಸಿಕೊಂಡರು.

ಗುತ್ತಿಗೆದಾರ ಸತೀಶ್ ಪರವಾಗಿ ಜಿಪಿಎ ಹೋಲ್ಡರ್ ಪಡೆದಿರುವ ಅಭಿಲಾಷ್ ಸಭೆಗೆ ಹಣದ ಸಮಸ್ಯೆ ಎದುರಾಗಿರುವ ಕುರಿತು ಮಾಹಿತಿ ನೀಡಿದರು. ಈಗಾಗಲೇ ನಡೆಸಿರುವ ಕಾಮಗಾರಿಗೆ ಇನ್ನೂ ಹಣ ಬಂದಿಲ್ಲ. ಈ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಆದರೂ ಕಾಮಗಾರಿ ಪೂರ್ಣಗೊಳಿಸಲಾಗುವುದು. ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.

ಈ ನಡುವೆ ಸದಸ್ಯ ಚನ್ನಪ್ಪ ಮಾತನಾಡಿ, ಕಾಮಗಾರಿ ಮುಕ್ತಾಯಗೊಳಿಸುವುದು ಗುತ್ತಿಗೆದಾರರ ಜವಾಬ್ದಾರಿಯಾಗಿದೆ. ಈಗಾಗಲೇ ಮುಂಗಡ ಹಣ ಸಹ ಪಾವತಿಸಲಾಗಿದೆ. ಆದರೂ ಕಾಮಗಾರಿ ಪೂರ್ಣಗೊಳಿಸದಿರುವುದು ಸರಿಯಲ್ಲ ಎಂದರು.

ಪೌರಾಯುಕ್ತ ಪ್ರಕಾಶ್ ಎಂ.ಚನ್ನಪ್ಪನವರ್ ಮಾತನಾಡಿ, ಚರಂಡಿ, ರಸ್ತೆ ಸೇರಿದಂತೆ ಯುಜಿಡಿ ಕಾಮಗಾರಿಗಳನ್ನು ಮುಂದಿನ ೧೫ ದಿನಗಳಲ್ಲಿ ಬಗೆಹರಿಸುವುದಾಗಿ ಭರವಸೆ ನೀಡಿದರು.

ನಗರಸಭೆ ಉಪಾಧ್ಯಕ್ಷ ಎಂ.ಮಣಿ ಎಎನ್‌ಎಸ್ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ