ಪಶ್ಚಿಮ ಬಂಗಾಳದಲ್ಲಿ ಹಿಂದು ಸಮುದಾಯದ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Apr 22, 2025, 01:48 AM IST
21ಕೆಎಂಎನ್ ಡಿ16 | Kannada Prabha

ಸಾರಾಂಶ

ಪಶ್ಚಿಮ ಬಂಗಾಳವನ್ನು ಹಿಂಸಾಚಾರದ ಅಗ್ನಿಯಲ್ಲಿ ಸುಟ್ಟು ಹಾಕಲಾಗುತ್ತಿದೆ. ಹಿಂದು ಸಮುದಾಯವರಿಗೆ ಕಿರುಕುಳ ನೀಡಲಾಗುತ್ತಿದೆ. ಹಿಂದು ಹಾಗೂ ರಾಷ್ಟ್ರ ವಿರೋಧಿ ಶಕ್ತಿಗಳಿಗೆ ತಮ್ಮ ಕುತಂತ್ರ ಯೋಜನೆಯನ್ನು ನಿಷ್ಕಂಟಕವಾಗಿ ನಿರ್ವಹಿಸಲು ಸಂಪೂರ್ಣ ಮುಕ್ತತೆ ನೀಡಲಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ವಕ್ಫ್ ಕಾಯ್ದೆ ವಿರೋಧದ ಹೆಸರಿನಲ್ಲಿ ಪಶ್ಚಿಮ ಬಂಗಾಳದಲ್ಲಿ ಹಿಂದು ಸಮುದಾಯದ ಮೇಲೆ ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ಬಜರಂಗ ದಳ, ವಿಶ್ವ ಹಿಂದು ಪರಿಷದ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಸಂಘಟನೆಗಳ ಕಾರ್ಯಕರ್ತರು, ಹಿಂದು ಸಮುದಾಯದವರ ಮೇಲೆ ದೌರ್ಜನ್ಯ ನಡೆಸಿರುವುದನ್ನು ಖಂಡಿಸಿದರು. ಪಶ್ಚಿಮ ಬಂಗಾಳದಲ್ಲಿ ತಕ್ಷಣದಿಂದಲೇ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪಶ್ಚಿಮ ಬಂಗಾಳವನ್ನು ಹಿಂಸಾಚಾರದ ಅಗ್ನಿಯಲ್ಲಿ ಸುಟ್ಟು ಹಾಕಲಾಗುತ್ತಿದೆ. ಹಿಂದು ಸಮುದಾಯವರಿಗೆ ಕಿರುಕುಳ ನೀಡಲಾಗುತ್ತಿದೆ. ಹಿಂದು ಹಾಗೂ ರಾಷ್ಟ್ರ ವಿರೋಧಿ ಶಕ್ತಿಗಳಿಗೆ ತಮ್ಮ ಕುತಂತ್ರ ಯೋಜನೆಯನ್ನು ನಿಷ್ಕಂಟಕವಾಗಿ ನಿರ್ವಹಿಸಲು ಸಂಪೂರ್ಣ ಮುಕ್ತತೆ ನೀಡಲಾಗಿದೆ ಎಂದು ದೂರಿದರು.

ಆ ರಾಜ್ಯದಲ್ಲಿ ಹಿಂದುಗಳ ಪರಿಸ್ಥಿತಿ ಚಿಂತಾಜನಕವಾಗಿದೆ. ಮುಶಿರಾಬಾದ್‌ನಲ್ಲಿ ಆರಂಭವಾದ ಭೀಕರ ಹಿಂಸೆ ಇಡೀ ರಾಜ್ಯವನ್ನು ವ್ಯಾಪಿಸುತ್ತಿರುವಂತಿದೆ. ಆಡಳಿತ ವ್ಯವಸ್ಥೆ ದಂಧೆಕೋರರ ಎದುರು ನಿಷ್ಕ್ರಿಯವಾಗಿದೆ. ಕೆಲ ಕಡೆ ಅವರಿಗೆ ಸಹಾಯಕರಾಗಿ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಪರಿಸ್ಥಿತಿ ನಿಯಂತ್ರಣದಿಂದ ದೂರವಾಗುವ ಮೊದಲು ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳದಲ್ಲಿನ ಆಡಳಿತವನ್ನು ತೆಗೆದುಕೊಂಡು ಹಿಂದು ಹಾಗೂ ರಾಷ್ಟ್ರ ವಿರೋಧಿ ಶಕ್ತಿಗಳ ದುಷ್ಕ್ರತ್ಯಕ್ಕೆ ಕಠಿಣ ಶಿಕ್ಷೆ ನೀಡಬೇಕು. ಅಂತೆಯೇ ಪಶ್ಚಿಮ ಬಂಗಾಳದಲ್ಲಿನ ಹಿಂಸೆಗೆ ಸಂಬಂಸಿದಂತೆ ತನಿಖೆಯನ್ನು ಎನ್‌ಐಎ ಮೂಲಕ ಮಾಡಿ ಆರೋಪಿಗಳಿಗೆ ತಕ್ಷಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

ಬಂಗಾಳದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕೇಂದ್ರದ ಭದ್ರತಾ ಪಡೆಗಳ ಕೈಗೆ ಒಪ್ಪಿಸಬೇಕು. ಎಎಫ್‌ಎಸ್‌ಪಿಎ ಕಾಯ್ದೆ ಜಾರಿಗೆ ತರಬೇಕು. ಬಾಂಗ್ಲಾದೇಶಿ ಮತ್ತು ರೊಹಿಂಗ್ಯಾ ಗೂಢಾಚಾರಿಗಳನ್ನು ಗುರುತಿಸಿ ಅವರನ್ನು ತಕ್ಷಣದ ದೇಶದಿಂದ ಹೊರಗೆ ಹಾಕಬೇಕು. ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದ 450 ಕಿ.ಮೀ ಗಡಿಯ ಮೇಲೆ ತಂತಿಬೇಲಿ ಹಾಕುವ ಕೆಲಸವನ್ನು ತಕ್ಷಣವೇ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿಶ್ವ ಹಿಂದು ಪರಿಷತ್ ನ ಸಹಕಾರ್ಯದರ್ಶಿ ಚಿಕ್ಕಬಳ್ಳಿ ಬಾಲು, ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಆದಿನಾರಾಯಣ್, ರವಿ, ಸಂತೋಷ್, ಪುನೀತ್, ವಿವೇಕ್, ಯಶ್ವಂತ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!