- ಜಿಪಂನಲ್ಲಿ ಜಿಲ್ಲಾಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ । 156 ಮನೆಗಳಿಗೆ ವಿದ್ಯುತ್: ಬೆಸ್ಕಾಂ ಭರವಸೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ಜಿಲ್ಲೆಯಲ್ಲಿ ರೈತರಿಗೆ ಸಮರ್ಪಕ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಪ್ರಸ್ತುತ ಕೇವಲ 4 ರಿಂದ 5 ಗಂಟೆ ಮಾತ್ರ ವಿದ್ಯುತ್ ನೀಡಲಾಗುತ್ತಿದೆ. ಇದನ್ನು ಕೂಡಲೇ ಸರಿಪಡಿಸಿ ರೈತರಿಗೆ ನಿರಂತರ 7 ತಾಸು ವಿದ್ಯುತ್ ಸರಬರಾಜು ಮಾಡಲು ಕ್ರಮ ವಹಿಸುವಂತೆ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಬಸವರಾಜಪ್ಪ ಬೆಸ್ಕಾಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯಿತಿಯ ಎಸ್.ಎಸ್. ಮಲ್ಲಿಕಾರ್ಜುನ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಗಳೂರು ತಾಲೂಕಿನಲ್ಲಿ 30*40 ಮತ್ತು ಅದಕ್ಕಿಂತ ಕಡಿಮೆ ಅಳತೆ ನಿವೇಶನಗಳಲ್ಲಿ ನಿರ್ಮಿಸಲಾದ ಸುಮಾರು 156 ಮನೆಗಳಿಗೆ ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಲ್ಪಿಸಲು ಅನುಮತಿ ನೀಡುತ್ತಿಲ್ಲ ಎಂಬ ವಿಷಯ ಸಮಿತಿ ಸದಸ್ಯರು ಸಭೆ ಗಮನಕ್ಕೆ ತಂದರು. ಈ ಬಗ್ಗೆ ಕೂಡಲೇ ಪರಿಶೀಲನೆ ನಡೆಸಿ, ನಿಯಮಾನುಸಾರ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ವಹಿಸುವುದಾಗಿ ಬೆಸ್ಕಾಂ ಅಧಿಕಾರಿಗಳು ಸಭೆಗೆ ಭರವಸೆ ನೀಡಿದರು.
ಗೃಹಲಕ್ಷ್ಮಿ ಯೋಜನೆ:
ಶಕ್ತಿ ಯೋಜನೆ:
ಯುವನಿಧಿ ಯೋಜನೆ:
ಸಭೆಯಲ್ಲಿ ಸಮಿತಿ ಉಪಾಧ್ಯಕ್ಷರಾದ ಕುಕ್ಕವಾಡ ಮಂಜಣ್ಣ, ನಂಜಾ ನಾಯ್ಕ್, ರಾಜೇಶ್ವರಿ, ಅನಿಸ್ ಪಾಷಾ, ಚಂದ್ರಶೇಖರ, ಸಮಿತಿ ಸದಸ್ಯರಾದ ಡೋಲಿ ಚಂದ್ರು, ನಾಗರಾಜ್, ಶ್ರೀನಿವಾಸ್ ಚನ್ನಗಿರಿ, ಬಾತಿ ಉಮೇಶ್, ಶಿವಶಂಕರ್ ಕೈದಾಳ್, ಜಗಳೂರು ಷಂಷಿರ್ ಅಹಮದ್, ರಾಘವ ಗೌಡ, ಲಿಯಾಕತ್ ಅಲಿ, ಅಲಿ ರೆಹಮತ್, ಶಿವರಾಂ ನಾಯ್ಕ್, ನೀಲಗಿರಿಯಪ್ಪ ಹಾಗೂ ಜಿಲ್ಲಾ ಮತ್ತು ತಾಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
(ಬಾಕ್ಸ್)
* 600 ಹಳ್ಳಿಗಳಿಗೆ ಅಧಿಕಾರಿಗಳೊಂದಿಗೆ ಭೇಟಿ: ಸಿಇಒ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲ ರಾವ್ ಮಾತನಾಡಿ, ಪ್ರಸ್ತುತ ಸಾಲಿನ ಪದವಿ ಮತ್ತು ಡಿಪ್ಲೊಮಾ ಫಲಿತಾಂಶಗಳು ಹೊರಬಂದಿದ್ದು, ಹೆಚ್ಚಿನ ನಿರುದ್ಯೋಗಿಗಳು ಯೋಜನೆಯಡಿ ನೋಂದಾಯಿಸಿಕೊಳ್ಳಲು ಅರ್ಹರಿದ್ದಾರೆ. ಆದ್ದರಿಂದ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಬ್ಯಾನರ್ ಮತ್ತು ಪೋಸ್ಟರ್ಗಳ ಮೂಲಕ ಜಾಗೃತಿ ಮೂಡಿಸಿ, ವಿಶೇಷ ಅಭಿಯಾನ ಹಮ್ಮಿಕೊಳ್ಳಬೇಕು. ಅಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಡಿ ಜಿಲ್ಲೆಯ 600 ಹಳ್ಳಿಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದು, ಕುಡಿಯುವ ನೀರು, ಸ್ವಚ್ಛತೆ, ಇ-ಸ್ವತ್ತು ಮುಂತಾದ ಸಮಸ್ಯೆಗಳಿಗೆ ರೈತರೊಂದಿಗೆ ಸಂವಾದ ಮಾಡಿದ್ದು, ಅನೇಕ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗಿದೆ ಎಂದರು.- - -
-12ಕೆಡಿವಿಜಿ37:ದಾವಣಗೆರೆಯ ಜಿಪಂ ಸಭಾಂಗಣದಲ್ಲಿ ಶಾಮನೂರು ಬಸವರಾಜಪ್ಪ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.