ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಅವಕಾಶ ಕಲ್ಪಿಸಿ: ಡಿಸಿ ಡಾ.ಕೆ.ವಿದ್ಯಾಕುಮಾರಿ

KannadaprabhaNewsNetwork |  
Published : Nov 08, 2024, 12:00 AM IST
7ಬಾಲಭವನ | Kannada Prabha

ಸಾರಾಂಶ

ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ರಾಜ್ಯ ಬಾಲಭನವ ಸೊಸೈಟಿ, ಜಿಲ್ಲಾ ಬಾಲಭವನ ಸಮಿತಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆ ಅಂಗವಾಗಿ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಅದನ್ನು ಹೊರತರಲು ಸೂಕ್ತ ವೇದಿಕೆ ಕಲ್ಪಿಸಿಕೊಡಬೇಕು. ಹೆತ್ತವರು ಮಕ್ಕಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕು. ಮಕ್ಕಳು ತಮ್ಮ ಬಾಲ್ಯವನ್ನು ಅನುಭವಿಸಲು ಮುಕ್ತ ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.ಅವರು ಬುಧವಾರ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ರಾಜ್ಯ ಬಾಲಭನವ ಸೊಸೈಟಿ, ಜಿಲ್ಲಾ ಬಾಲಭವನ ಸಮಿತಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಸ್ಪರ್ಧೆಗಳನ್ನು ಉದ್ಘಾಟಿಸಿದರು.ಜಿ.ಪಂ. ಮುಖ್ಯ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್ ಮಾತನಾಡಿ, ಮಕ್ಕಳ ಪ್ರತಿಭೆ ಪ್ರೇರೇಪಿಸುವ ಜೊತೆಗೆ ಪ್ರಕೃತಿಯ ಮಹತ್ವದ ಕುರಿತು ಮಕ್ಕಳಿಗೆ ಪರಿಚಯ ಮಾಡಿಸಬೇಕು. ಇದರಿಂದ ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಅವರು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ ಎಂದರು.ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ. ಉಪಸ್ಥಿತರಿದ್ದರು. ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯಕ್, ಮಕ್ಕಳ ವಾರ್ಡ್ ಕ್ಲಬ್ ಅಧ್ಯಕ್ಷೆ ಸುಮನಾ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಸ್ವಾಗತಿಸಿದರು. ದೀಪಾ ನಿರೂಪಿಸಿದರು. ಶ್ವೇತಾ ವಂದಿಸಿದರು.

ನಂತರ ಶಾಸ್ತ್ರೀಯ ಮತ್ತು ಜಾನಪದ ನೃತ್ಯ, ಕರ್ನಾಟಕ ಮತ್ತು ಹಿಂದುಸ್ಥಾನಿ ಸಂಗೀತ, ಸುಗಮ ಸಂಗೀತ, ವಿಜ್ಞಾನದಲ್ಲಿ ನೂತನ ಆವಿಷ್ಕಾರ, ಚಿತ್ರಕಲಾ ಸ್ಪರ್ಧೆ, ವಾದ್ಯ ಸಂಗೀತ ಸ್ಪರ್ಧೆಗಳು ನಡೆದವು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ