ಕನ್ನಡಪ್ರಭ ವಾರ್ತೆ ತುಮಕೂರು
ಸೋಮವಾರ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ಆಯೋಜಿಸಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಎಚ್.ಐ.ವಿ. ರೋಗಿಗಳಿಗೆ ಸರ್ಕಾರವೇ ಎಲ್ಲಾ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಿಲ್ಲ. ಅನೇಕ ವಿದೇಶಗಳಲ್ಲಿ ಸರ್ಕಾರೇತರ ಸಂಘ ಸಂಸ್ಥೆಗಳು ಸಮಾಜಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಂಡು ಸರ್ಕಾರಕ್ಕೆ ಪೂರಕವಾದ ಸೇವೆಗಳನ್ನು ನೀಡುತ್ತಿವೆ. ಅದೇ ರೀತಿ ನಮ್ಮಲ್ಲೂ ಏಡ್ಸ್ ರೋಗಿಗಳ ನೆರವಿಗಾಗಿ ಸರ್ಕಾರೇತರ ಸಂಸ್ಥೆಗಳು ಮುಂದೆ ಬಂದು ಸಹಕಾರ ನೀಡಬೇಕು ಎಂದರು.
ಕೋರ ಬಳಿಯಿರುವ ನಿರಾಶ್ರಿತ ಕೇಂದ್ರದಲ್ಲಿ ಏಡ್ಸ್ ರೋಗಿಯೊಬ್ಬರನ್ನು ದಾಖಲಿಸಲಾಗಿತ್ತು. ಇದು ಅಂಗವಿಕಲರು, ವೃದ್ಧರು ಇರುವ ನಿರಾಶ್ರಿತ ಕೇಂದ್ರವಾಗಿರುವುದರಿಂದ ಏಡ್ಸ್ ರೋಗಿಯನ್ನು ಇರಿಸಿಕೊಳ್ಳಲು ಆಗುವುದಿಲ್ಲವೆಂದು ಹೊರ ಕಳಿಸಲಾಗಿದೆ ಎಂದು ತಿಳಿಸಿದರು.ಏಡ್ಸ್ ದಿನಚರಣೆ ಕೇವಲ ಆಚರಣೆ ಮಟ್ಟಕ್ಕೆ ಸೀಮಿತವಾಗಬಾರದು. ಎಚ್.ಐ.ವಿ ರೋಗಿಗಳಿಗೂ ಸಮಾಜದಲ್ಲಿ ಗೌರವದಿಂದ ಬದುಕುವ ಹಕ್ಕು ಇದೆ. ಅಧಿಕಾರಿಗಳು, ಆರೋಗ್ಯ ಇಲಾಖೆ ಹಾಗೂ ಸಮಾಜ ಸೇವಾ ಸಂಸ್ಥೆಗಳು ಒಟ್ಟಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ರೋಗಿಗಳಿಗೆ ಬೇಕಾದ ಸಮಯೋಚಿತ ಚಿಕಿತ್ಸೆ ಮತ್ತು ಸೌಲಭ್ಯಗಳು ದೊರಕುತ್ತವೆ ಎಂದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಮೋಹನ್ ದಾಸ್ ಮಾತನಾಡಿ, ಜಿಲ್ಲೆಯಲ್ಲಿ ಏಡ್ಸ್ ಹರಡುವಿಕೆಯನ್ನು ತಡೆಯುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಎಲ್ಲಾ ತಾಲೂಕುಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವಿವಿಧ ಅರಿವು ಕಾರ್ಯಕ್ರಮಗಳು ಹಾಗೂ ಜಾಗೃತಿ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ನಗರದಲ್ಲಿ ಕೃಷಿ ಮಾರುಕಟ್ಟೆ, ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣಗಳಲ್ಲಿ ಏಡ್ಸ್ ನಿಯಂತ್ರಣ ಕುರಿತ ಕರಪತ್ರಗಳನ್ನು ಹಂಚಿ, ಜಾನಪದ ಕಲಾ ತಂಡಗಳಿಂದ ಬೀದಿ ನಾಟಕ ಪ್ರದರ್ಶನದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್, ಪ್ರಭಾರ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಅಶೋಕ್, ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.---------------
ಕೋಟ್..ಏಡ್ಸ್ ಎಂಬುದು ಒಂದು ರೋಗವಷ್ಟೇ. ರೋಗವನ್ನು ದೂರವಿಡಬೇಕೆ ವಿನಃ ರೋಗಿಯನ್ನಲ್ಲ. ಆದ್ದರಿಂದ ಎಲ್ಲರೂ ಏಡ್ಸ್ ರೋಗಿಗಳನ್ನು ಸಮಾನವಾಗಿ ಕಾಣುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು. - ಡಾ. ಚಂದ್ರಶೇಖರ್. ಡಿಎಚ್ಒ ತುಮಕೂರು
------------------------------------