ಮಂಡ್ಯ ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರು ಪೂರೈಸಿ: ಜಿಲ್ಲಾಧಿಕಾರಿ ಡಾ.ಕುಮಾರ

KannadaprabhaNewsNetwork |  
Published : Jul 13, 2025, 01:19 AM IST
೧೨ಕೆಎಂಎನ್‌ಡಿ-೫ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ನಗರ ಕೋಶಾಭಿವೃದ್ಧಿ  ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು. | Kannada Prabha

ಸಾರಾಂಶ

ಮಂಡ್ಯ ಜಿಲ್ಲೆಯಲ್ಲಿ ಒಟ್ಟು ೯ ಇಂದಿರಾ ಕ್ಯಾಂಟೀನ್ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಉತ್ತಮ ಹಾಗೂ ಶುದ್ಧ ಅಹಾರ ಒದಗಿಸುತ್ತಿರುವ ಬಗ್ಗೆ ಹಾಗೂ ಇಂದಿರಾ ಕ್ಯಾಂಟೀನ್‌ಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಆಹಾರದ ಗುಣಮಟ್ಟ ಪರೀಶೀಲನೆ ನಡೆಸಿ.

ಕನ್ನಡಪ್ರಭ ವಾರ್ತೆ ಮಂಡ್ಯ

ನಗರ ಸ್ಥಳೀಯ ಸಂಸ್ಥೆಗಳು ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರಾಜಿಯಾಗದೆ ಸಾರ್ವಜನಿಕರಿಗೆ ಶುದ್ಧ ಕುಡಿಯುವ ಒದಗಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ನಗರ ಕೋಶಾಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಮೂರು ತಿಂಗಳ ಕುಡಿಯುವ ನೀರಿನ ಮಾದರಿಯ ವರದಿಯನ್ನು ಅವಲೋಕಿಸಿ ಸಮಸ್ಯೆ ಇರುವ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳನ್ನು ಸರಿಪಡಿಸುವಂತೆ ಸಲಹೆ ನೀಡಿದರು.

ನಗರ ಪ್ರದೇಶದ ವಸತಿರಹಿತ ಪಟ್ಟಿಯನ್ನು ಸಿದ್ಧಪಡಿಸಿ ಆನ್‌ಲೈನ್ ತಂತ್ರಾಂಶಗಳಿಗೆ ಆಪ್‌ಲೋಡ್ ಮಾಡಬೇಕು. ಅಂಬೇಡ್ಕರ್ ವಸತಿ ಯೋಜನೆಯಲ್ಲಿ ಒಟ್ಟು ೯೭೪ ಮನೆಗಳು ಪೂರ್ಣಗೊಂಡಿದೆ. ೧೫೬ ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಕಳೆದ ಒಂದು ತಿಂಗಳಿನಿಂದ ೭ ಮನೆಗಳ ಕಾಮಗಾರಿ ಪೂರ್ಣಗೊಂಡಿದೆ. ವಸತಿ ಸಂಬಂಧಿಸಿದ ಯೋಜನೆಗಳ ಕಾಮಗಾರಿಯನ್ನು ವಿಳಂಬ ಮಾಡದೆ ಶೀಘ್ರವಾಗಿ ಪೂರ್ಣಗೊಳಿಸಿ ಎಂದರು.

೧೫ ನೇ ಹಣಕಾಸು ಆಯೋಗದಲ್ಲಿ ಯಾವುದೇ ಕಾಮಗಾರಿಯ ಟೆಂಡರ್‌ಗಳನ್ನು ಬಾಕಿ ಉಳಿಸಿಕೊಳ್ಳದೆ ಶೀಘ್ರವಾಗಿ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಿ. ಟೆಂಡರ್‌ಗಳನ್ನು ವಿಳಂಬ ಮಾಡಬೇಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರ ತ್ಯಾಜ್ಯ ನಿರ್ವಹಣೆಯನ್ನು ಸೂಕ್ತ ಸಮಯಕ್ಕೆ ವಿಲೇವಾರಿ ಮಾಡುವುದು. ಆಸ್ತಿ ತೆರಿಗೆ ವಸೂಲಾತಿಯನ್ನು ಕಳೆದ ಸಭೆಗೆ ಹೋಲಿಸಿದರೆ ಒಟ್ಟು ಶೇ.೫ ತೆರಿಗೆ ವಸೂಲಾತಿ ಮಾಡಿ ಪ್ರಗತಿ ಸಾಧಿಸಲಾಗಿದೆ. ಪ್ರಗತಿಯನ್ನು ಇನ್ನೂ ಹೆಚ್ಚುಗೊಳಿಸಿ. ನೀರಿನ ಶುಲ್ಕವನ್ನು ವಸೂಲಾತಿ ಶೇಕಡಾವಾರು ಕಡಿಮೆ ಇದ್ದು ನೀರಿನ ಶುಲ್ಕವನ್ನೂ ಪಾವತಿಸುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದರು.

ಜಿಲ್ಲೆಯಲ್ಲಿ ಒಟ್ಟು ೯ ಇಂದಿರಾ ಕ್ಯಾಂಟೀನ್ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಉತ್ತಮ ಹಾಗೂ ಶುದ್ಧ ಅಹಾರ ಒದಗಿಸುತ್ತಿರುವ ಬಗ್ಗೆ ಹಾಗೂ ಇಂದಿರಾ ಕ್ಯಾಂಟೀನ್‌ಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಆಹಾರದ ಗುಣಮಟ್ಟ ಪರೀಶೀಲನೆ ನಡೆಸುವಂತೆ ಸೂಚಿಸಿದರು.

ಸಭೆಯಲ್ಲಿ ತಿಳಿಸಿರುವ ಕೆಲಸಕಾರ್ಯಗಳು ಮುಂದಿನ ಸಭೆ ನಡೆಯುವಷ್ಟರಲ್ಲಿ ಪ್ರಗತಿಯಾಗಿರಬೇಕು. ಅಧಿಕಾರಿಗಳು ವಿಶೇಷ ಕಾಳಜಿ ಮತ್ತು ಮುತುವರ್ಜಿ ವಹಿಸಿ ತಮ್ಮ ಕಾರ್ಯ ದಕ್ಷತೆಯನ್ನು ಹೆಚ್ಚಿಸಿಕೊಳ್ಳಬೇಕು. ಕೆಲಸಗಳಲ್ಲಿ ನಿರ್ಲಕ್ಷ್ಯ ತೊರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶಾಧಿಕಾರಿ ಟಿ.ಎನ್.ನರಸಿಂಹಮೂರ್ತಿ, ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರತಾಪ್, ನಗರಸಭೆ ಪೌರಾಯುಕ್ತೆ ಪಂಪಾಶ್ರೀ, ನಗರಸಭೆಯ ಪರಿಸರ ಅಭಿಯಂತರ ರುದ್ರೇಗೌಡ ಇತರರಿದ್ದರು.

PREV

Latest Stories

ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು
ಕೃಷ್ಣಾ ಮೇಲ್ದಂಡೆ-3 ಭೂಸ್ವಾಧೀನಕ್ಕೆ 2.01 ಲಕ್ಷ ಕೋಟಿ ಬೇಕು : ಸಚಿವ ಕೃಷ್ಣ
ನಮ್ಮ ಗ್ಯಾರಂಟಿ ಯೋಜನೆ ದೇಶಕ್ಕೇ ಮಾದರಿ - ಟೀಕಿಸಿದ್ದ ಬಿಜೆಪಿಯೇ ಕಾಪಿ ಮಾಡಿದೆ : ಡಿಸಿಎಂ ಡಿಕೆಶಿ