- ಮುಖ್ಯಶಿಕ್ಷಕರಿಗೆ ಬಿಇಒ ನಿಂಗಪ್ಪ ಕೆ.ಟಿ. ಸೂಚನೆ । ಶಾಲಾ ಪ್ರಾರಂಭೋತ್ಸವ ಪೂರ್ವಸಿದ್ಧತಾ ಸಭೆ
ಕನ್ನಡಪ್ರಭ ವಾರ್ತೆ ಹೊನ್ನಾಳಿ
ಶಾಲಾ ಅರಂಭದ ದಿನ ಸಮೀಪಿಸುತ್ತಿದ್ದು, ಶಿಕ್ಷಕರು ಶಿಥಿಲಗೊಂಡ ಶಾಲಾ ಕೊಠಡಿಗಳಲ್ಲಿ ಮಕ್ಕಳನ್ನು ಕೂರಿಸಬಾರದು. ಕೊಠಡಿ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮತ್ತು ನಿಖರ ಮಾಹಿತಿಯನ್ನು ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕುಗಳ ಶಾಲಾ ಶಿಕ್ಷಕರು ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಇಲಾಖೆಯ ಸಿ.ಆರ್.ಪಿ.ಗಳ ಮೂಲಕ ಸಲ್ಲಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಿಂಗಪ್ಪ ಕೆ.ಟಿ. ಹೇಳಿದರು.ಪಟ್ಟಣದ ಗುರು ಭವನದಲ್ಲಿ ಹಮ್ಮಿಕೊಂಡಿದ್ದ 202-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವಕ್ಕೆ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೇ 29 ಮತ್ತು 30ರಂದೇ ಎಲ್ಲ ಶಿಕ್ಷಕರು ಶಾಲೆಗಳಿಗೆ ತೆರಳಿ ಸ್ವಚ್ಛತೆ, ಅಕ್ಷರ ದಾಸೋಹ ವ್ಯವಸ್ಥೆ, ಪಠ್ಯಪುಸ್ತಕಗಳ ವ್ಯವಸ್ಥೆ, ಶಾಲಾ ಕೊಠಡಿಗಳ ಸಿದ್ಧತೆ ಸೇರಿದಂತೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದರು.
ಮುಂದಿನ ದಿನಗಳಲ್ಲಿ ಶಿಕ್ಷಕರ ನಿಖರ ಹಾಜರಾತಿ ಬಗ್ಗೆ ಇಲಾಖೆ ಜಾರಿಗೆ ತಂದಿರುವ ನೂತನ ಆ್ಯಪ್ ಅನ್ನು ತಮ್ಮ ಮೊಬೈಲ್ಗಳಿಗೆ ಅಳವಡಿಸಿಕೊಳ್ಳಬೇಕು. ಈ ಆ್ಯಪ್ ಶಿಕ್ಷಕ ಯಾವ ಸಂದರ್ಭದಲ್ಲಿ ಎಲ್ಲಿದ್ದಾರೆ, ತಡವಾದ, ಗೈರುಹಾಜರಾದ, ರಜೆಯ ಬಗ್ಗೆ ಕೂಡ ನೋಂದಣೆಯಾಗುತ್ತದೆ. ಗೈರು ಹಾಜರಾದ ದಿನಗಳಿಗೆ ವೇತನ ಕಟ್ ಅಗುವ ಸಾಧ್ಯತೆಗಳೂ ಇವೆ. ಶಿಕ್ಷಕರು ಪ್ರಾಮಾಣಿಕ ಹಾಗೂ ಜಾಗರೂತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ನೂತನ ಪದಾಧಿಕಾರಿಗಳಿಗೆ ಸನ್ಮಾನ:
ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲಾಧಿಕಾರಿ ತಿಪ್ಪೇಶಪ್ಪ, ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಾಗೇಂದ್ರಪ್ಪ, ತಾಲೂಕು ದೈಹಿಕ ಶಿಕ್ಷಣ ಸಂಯೋಜನಾಧಿಕಾರಿ ಜಗದೀಶ್, ಇ.ಸಿ.ಒ. ಮುದ್ದನಗೌಡ, ಅರುಣ ಇತರರು ಇದ್ದರು.
-27ಎಚ್.ಎಲ್.ಐ1: