ಕನ್ನಡಪ್ರಭ ವಾರ್ತೆ ಮಧುಗಿರಿ
ಇಲ್ಲಿನ ತಾಪಂ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೇಸಿಗೆ ಕಾಲದಲ್ಲಿ ಉಷ್ಣಾಂಶ ಹೆಚ್ಚಿಗೆ ಇರುವುದರಿಂದ ಕುಡಿಯುವ ಜನ ಹಾಗೂ ಜಾನುವಾರುಗಳಿಗೆ ನೀರಿನ ಅಭಾವ ಹಾಗೂ ಮೇವಿನ ಕೊರತೆ ಉಂಟಾಗದಂತೆ ಕ್ರಮ ವಹಿಸುವ ಜೊತೆಗೆ ಮೇವಿನ ಬೀಜವನ್ನು ಮೇವು ಬೆಳೆಯುವ ರೈತರಿಗೆ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ವಿದ್ಯುತ್ ಕೊರತೆ ಸಂಭವಿಸದಂತೆ ಕ್ರಮ ಕೈಗೊಳ್ಳಲು ಆದೇಶಿಸಿದರು. ಗ್ರಾಪಂಗಳಲ್ಲಿ ಅವಶ್ಯವಿರುವ ಭಾಗಗಳಲ್ಲಿ ತುರ್ತಾಗಿ ಬೋರ್ ವೆಲ್ ಕೊರೆದು ಪೈಪ್ ಲೈನ್ ಅಳವಡಿಸಿ ಕಾಮಗಾರಿ ಕೈಗೊಂಡು ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ. ತಾಲೂಕಿನಲ್ಲಿ ಬಹುತೇಕ ಎಲ್ಲ ಕೆರೆಗಳಲ್ಲೂ ನೀರಿದ್ದು ಪಂಚಾಯಿತಿ ಅಧಿಕಾರಿಗಳು ಸಮರ್ಥವಾಗಿ ಬಳಸಿ ಕೊಂಡು ಕುಡಿವ ನೀರು ಒದಗಿಸುವಂತೆ ಸಚಿವ ರಾಜಣ್ಣ ಸಲಹೆ ನೀಡಿದರು. ಹನಿಟ್ರ್ಯಾಪ್ ವಿಚಾರದಲ್ಲಿ ನನ್ನ ಮೇಲೆ ಹನಿಟ್ರ್ಯಾಪ್ ಪ್ರಯತ್ನ ಅಷ್ಠೇ, ನಾನೇನೂ ಹನಿಟ್ರ್ಯಾಪ್ಗೆ ಒಳಗಾಗಿಲ್ಲ, ಆ ಪ್ರಯತ್ನ ಯಾರು ಮಾಡಿರಬಹುದು ಎಂಬುದನ್ನು ಪತ್ತೆ ಹಚ್ಚಿ ಅವರಿಗೆ ಶಿಕ್ಷೆ ಕೊಡಿ ಬೇರೆವರಿಗೆ ಈ ರೀತಿ ಆಗದಂತೆ ಮುಂದೆ ಎಚ್ಚರಿಕೆ ವಹಿಸಬೇಕು ಎಂಬುದು ನನ್ನ ಕಳಕಳಿ ಎಂದರು.