ಮಳೆಯಿಂದ ಹಾನಿಗೀಡಾದ ಬೆಳೆಗಳಿಗೆ ಶೀಘ್ರ ಪರಿಹಾರ ನೀಡಿ

KannadaprabhaNewsNetwork |  
Published : Sep 03, 2025, 01:01 AM IST
1ಕೆಡಿವಿಜಿ1-ದಾವಣಗೆರೆ ಜಿಲ್ಲಾ ರೈತರ ಒಕ್ಕೂಟದ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ. | Kannada Prabha

ಸಾರಾಂಶ

ಕಳೆದೊಂದು ತಿಂಗಳಿನಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹೊಲಗಳಲ್ಲಿ ನೀರು ನಿಂತು, ಬೆಳೆದ ಪೈರುಗಳು ಕೊಳೆಯುತ್ತಿವೆ. ಈ ಹಿನ್ನೆಲೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಬೆಳೆಹಾನಿ ಪ್ರದೇಶಕ್ಕೆ ಶೀಘ್ರ ಭೇಟಿ ನೀಡಬೇಕು. ಸಂಕಷ್ಟಕ್ಕೆ ತುತ್ತಾದ ರೈತರ ನೆರವಿಗೆ ಧಾವಿಸಬೇಕು ಎಂದು ಜಿಲ್ಲಾ ರೈತರ ಒಕ್ಕೂಟ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ ಒತ್ತಾಯಿಸಿದ್ದಾರೆ.

- ಬೆಳೆ ಹಾನಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ, ಡಿಸಿ ಭೇಟಿ ನೀಡಲಿ: ಸತೀಶ ಕೊಳೇನಹಳ್ಳಿ ಆಗ್ರಹ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಕಳೆದೊಂದು ತಿಂಗಳಿನಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹೊಲಗಳಲ್ಲಿ ನೀರು ನಿಂತು, ಬೆಳೆದ ಪೈರುಗಳು ಕೊಳೆಯುತ್ತಿವೆ. ಈ ಹಿನ್ನೆಲೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಬೆಳೆಹಾನಿ ಪ್ರದೇಶಕ್ಕೆ ಶೀಘ್ರ ಭೇಟಿ ನೀಡಬೇಕು. ಸಂಕಷ್ಟಕ್ಕೆ ತುತ್ತಾದ ರೈತರ ನೆರವಿಗೆ ಧಾವಿಸಬೇಕು ಎಂದು ಜಿಲ್ಲಾ ರೈತರ ಒಕ್ಕೂಟ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ಈರುಳ್ಳಿ, ಮೆಕ್ಕೆಜೋಳ, ಕಬ್ಬು, ಬತ್ತ ಸೇರಿದಂತೆ ತೋಟಗಾರಿಕೆ ಬೆಳೆಗಳೂ ಸಂಪೂರ್ಣ ಹಾನಿಗೀಡಾಗಿವೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಕ್ಕಳಿಗಿಂತ ಅಕ್ಕರೆಯಿಂದ ಬೆಳೆದ ಬೆಳೆಗಳ ಪರಿಸ್ಥಿತಿ ಕಂಡು ದಿಕ್ಕು ತೋಚದಂತಾಗಿದ್ದಾರೆ. ತಕ್ಷಣ‍ವೇ ಸರ್ಕಾರ ಸಂತ್ರಸ್ಥ ರೈತರಿಗೆ ನೆರವಾಗಬೇಕು ಎಂದಿದ್ದಾರೆ.

ಹಾನಿ ತಡೆಯಲು ಜಿಲ್ಲಾಡಳಿತ ಇಚ್ಛಾಶಕ್ತಿ ತೋರಬೇಕಿದೆ. ಅಧಿಕಾರಿಗಳು ಜಡತ್ವ ತೊರೆದು, ಜನರ ಸಂಕಷ್ಟ ಅರಿಯುವ ಮತ್ತು ಸಂವೇದನೆಗೆ ಮಿಡಿದು ಕೆಲಸ ಮಾಡಬೇಕು. ಅತಿವೃಷ್ಟಿ ಅನಾಹುತಗಳ ನಿರ್ವಹಣೆಗೆ ದಾವಣಗೆರೆ ಜಿಲ್ಲೆಯಲ್ಲಿ ರೈತರಿಗಾಗಿ ತಕ್ಷಣವೇ ಸಹಾಯವಾಣಿ ಸ್ಥಾಪಿಸಿ, ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ದಿನಗಳ ಕಾಲ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಮುಂದಿನ ಅನೇಕ ದಿನಗಳ ಕಾಲ ಕೃಷಿ ಚಟುವಟಿಕೆಗಳನ್ನು ನಡೆಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಮುಖ ಬೆಳೆಗಳೇ ನಷ್ಟಾಗಿದ್ದರಿಂದ ರೈತರ ಪರಿಸ್ಥಿತಿ ಶೋಚನೀಯವಾಗಿದೆ. ಸಾಲ ಮಾಡಿ, ಬಿತ್ತನೆಬೀಜ, ರಸಗೊಬ್ಬರ, ಕ್ರಿಮಿನಾಶಕ ಖರೀದಿಸಿ, ಬೆಳೆಗಳ ಬೆಳೆದ ರೈತರು ತಲೆ ಮೇಲೆ ಕೈ ಹೊತ್ತಿ ಕೂತಿದ್ದಾರೆ. ಇಂಥ ಸಂದರ್ಭದಲ್ಲಿ ನೊಂದ ರೈತರಲ್ಲಿ ಆತ್ಮಸ್ಥೈರ್ಯ ತುಂಬಿ, ನಿಮ್ಮೊಂದಿಗೆ ನಾವಿದ್ದೇವೆ ಎಂಬ ಭರವಸೆ ಮೂಡಿಸುವ ತುಂಬುವ ಕೆಲಸ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಮಾಡಬೇಕು ಎಂದು ಸತೀಶ ಕೊಳೇನಹಳ್ಳಿ ಮನವಿ ಮಾಡಿದ್ದಾರೆ.

- - -

-1ಕೆಡಿವಿಜಿ1: ಬಿ.ಎಂ.ಸತೀಶ ಕೊಳೇನಹಳ್ಳಿ.

PREV

Recommended Stories

ಜಾಗತಿಕ ಮಟ್ಟದಲ್ಲಿ ಸಾಧನೆ ನಾರಿ ಶಕ್ತಿಗೆ ಸಾಕ್ಷಿ
ಮಕ್ಕಳ ಕಲಿಕೆಯನ್ನು ಸೃಜನಾತ್ಮಕವಾಗಿಸಲು ನಲಿ-ಕಲಿ