ಮತಗಟ್ಟೆಗಳಿಗೆ ಮೂಲಸೌಕರ್ಯ ಕಲ್ಪಿಸಿ: ಡಿಸಿ ಡಾ.ಸುಶೀಲಾ

KannadaprabhaNewsNetwork |  
Published : Feb 16, 2024, 01:51 AM IST
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳ ಕುರಿತ ಪರಿಶೀಲನಾ ಸಭೆ ನಡೆಯಿತು. | Kannada Prabha

ಸಾರಾಂಶ

ಚುನಾವಣಾ ಪ್ರಕ್ರಿಯೆಯಲ್ಲಿ ಸರ್ಕಾರಿ ನೌಕಕರಾದ ನಾವೆಲ್ಲ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಚುನಾವಣಾ ಮಾರ್ಗಸೂಚಿ ಪ್ರಕಾರ ಕೆಲಸ ನಿರ್ವಹಿಸಬೇಕು.

ಕನ್ನಡಪ್ರಭ ವಾರ್ತೆ ಯಾದಗಿರಿ

ಮತಗಟ್ಟೆಗಳಲ್ಲಿ ಕುಡಿವ ನೀರು, ವಿದ್ಯುತ್, ಶೌಚಾಲಯ ಸೇರಿದಂತೆ ಎಲ್ಲ ಸೌಕರ್ಯ ಸುಸ್ಥಿತಿಯಲ್ಲಿವೆಯೇ ಎಂಬುದನ್ನು ಮತ್ತೊಮ್ಮೆ ಪರಿಶೀಲಿಸಿ ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಕೈಗೊಂಡು ಕ್ರಮಗಳ ವರದಿ ಸಲ್ಲಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅವರು ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳ ಕುರಿತ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಮತಗಟ್ಟೆಗಳು ಹೆಚ್ಚಾಗಿ ಶಾಲೆಗಳು ಹಾಗೂ ಅಂಗನವಾಡಿಗಳಲ್ಲಿ ಇರುತ್ತವೆ. ಈ ಸಂಬಂಧ ಮತಗಟ್ಟೆಗಳಲ್ಲಿ ಟೇಬಲ್, ಚೇರ್ , ಮತಗಟ್ಟೆಗಳಲ್ಲಿ ಅಂಗವಿಕಲರು ಪ್ರವೇಶಿಸಲು ಅನುಕೂಲವಾಗುವಂತೆ ಕಡ್ಡಾಯವಾಗಿ ರ್‍ಯಾಂಪ್ ಮತ್ತು ಇನ್ನಿತರ ಮೂಲ ಸೌಕರ್ಯಗಳ ವ್ಯವಸ್ಥೆಗಳನ್ನು ಪರಿಶೀಲಿಸಿ ಸಣ್ಣ ಪುಟ್ಟ ರಿಪೇರಿಗಳಿದ್ದಲ್ಲಿ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಸರ್ಕಾರಿ ನೌಕಕರಾದ ನಾವೆಲ್ಲ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಚುನಾವಣಾ ಮಾರ್ಗಸೂಚಿ ಪ್ರಕಾರ ಕೆಲಸ ನಿರ್ವಹಿಸಬೇಕು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮತಗಟ್ಟೆಗಳ ಬಗ್ಗೆ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಪರಿಶೀಲಿಸಿ ವರದಿ ಮಾಡಬೇಕು. ಗ್ರಾಮೀಣ ಪ್ರದೇಶದ ವ್ಯಾಪ್ತಿ ಬರುವ ಮತಗಟ್ಟೆ ಕೇಂದ್ರದ ಸುಸ್ಥಿತಿ ಕುರಿತು ಸಂಬಂಧಿಸಿದ ಅಧಿಕಾರಿಗಳು ವರದಿ ನೀಡಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್‌ ಸಿಇಓ ಗರಿಮಾ ಪನ್ವಾರ, ಜಿಲ್ಲಾ ಪಂಚಾಯತ್‌ ಸಿಪಿಓ ಗುರುನಾಥ ಗೌಡಪ್ಪನ್ನೋರ್, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಚುನಾವಣೆ ತಹಸೀಲ್ದಾರರ್ ಸಂತೋಷರಾಣಿ, ನಗರಸಭೆ ಪೌರಾಯುಕ್ತ ಲಕ್ಷ್ಮೀಕಾಂತ, ತಹಸೀಲ್ದಾರರಾದ ನಾಗಮ್ಮ ಎಂ. ಕಟ್ಟಿಮನಿ, ಗುರುಮಠಕಲ್ ತಹಸೀಲ್ದಾರ್ ನೀಲಪ್ರಭ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುಬ್ಬಿ ಪಟ್ಟಣ ಪಂಚಾಯಿತಿ ಆದಾಯ 2.30 ಕೋಟಿ ರು.
ರೈಲ್ವೆ ಪ್ರವೇಶ ಪರೀಕ್ಷೆ: ಕನ್ನಡಕ್ಕೆ ಅವಕಾಶ ನೀಡಿ