ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಶಿಕ್ಷಕರ ಭವನದಲ್ಲಿ ತಾಲೂಕು ಪಶುಪಾನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಆಯೋಜಿಸಿದ್ದ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆ (ಎನ್.ಎಲ್.ಎಂ) ಅನುಷ್ಟಾನ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮೀಣ ಯುವಕರ ವಲಸೆ ಇಂದು ಬಹುದೊಡ್ಡ ಸಮಸ್ಯೆಯಾಗಿದೆ. ಹೊಟ್ಟೆ ಪಾಡಿಗೆ ದೊಡ್ಡ ನಗರಗಳಲ್ಲಿ ಸೆಕ್ಯೂರಟಿ ಗಾರ್ಡ್, ಹೋಟೆಲ್ ಮತ್ತಿತರ ಸ್ಥಳಗಳಲ್ಲಿ ರೈತರ ಮಕ್ಕಳು ಅತ್ಯಂತ ಕನಿಷ್ಠ ವೇತನಕ್ಕೆ ದುಡಿಯುತ್ತಿದ್ದಾರೆ. ಇದರಿಂದ ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಉಂಟಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.ತೋಟಗಾರಿಕೆ, ಕೃಷಿ, ರೇಷ್ಮೆ, ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಗಳು ಪರಸ್ಪರ ಒಗ್ಗೂಡಿ ಸರ್ಕಾರದ ಸಹಾಯಧನ ಯೋಜನೆ ಮೂಲಕ ರೈತರ ಮಕ್ಕಳು ಪಶು ಸಾಕಾಣಿಕೆ, ಕುರಿ, ಕೋಳಿ, ಮೇಕೆ, ಮೊಲ, ಹಂದಿ ಸಾಕಾಣಿಕೆ ಮುಂತಾದ ಕೃಷಿ ಮತ್ತು ಇದಕ್ಕೆ ಪೂರಕವಾದ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್ ಮೂಲಕ ಅಗತ್ಯ ಸಾಲ ಕಲ್ಪಿಸಬೇಕು ಎಂದರು.
ಸಾಲಕ್ಕಾಗಿ ಅರ್ಜಿ ಸಲ್ಲಿಸಿರುವ ರೈತರ ಮಕ್ಕಳು, ಬ್ಯಾಂಕ್ಗಳ ವ್ಯವಸ್ಥಾಪಕರು ಮತ್ತು ಪಶು ಪಾಲನಾ ಇಲಾಖೆ ಅಧಿಕಾರಿಗಳ ಮುಖಾಮುಖಿ ಸಭೆ ನಡೆಸಲಾಗುತ್ತಿದೆ. ಬ್ಯಾಂಕ್ಗಳು ರೈತ ಉದ್ಯಮಿಗಳಿಗೆ ಅಗತ್ಯ ಸಾಲ ನೀಡಿದರೆ ವಾರ್ಷಿಕ 255 ಜನ ಯುವಕರು ಸ್ವಯಂ ಉದ್ಯೋಗ ಆರಂಭಿಸಲು ಸಹಕಾರಿಯಾಗುತ್ತದೆ ಎಂದರು.
ಜಿಲ್ಲಾ ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಸುರೇಶ್, ಲೀಡ್ ಬ್ಯಾಂಕ್ ಮ್ಯಾನೇಜರ್ ಅರುಣಕುಮಾರ್ ಅಗತ್ಯ ಮಾಹಿತಿ ತಿಳಿಸಿದರು. ಸಭೆಯಲ್ಲಿ ಪುರಸಭಾ ಸದಸ್ಯ ಗಿರೀಶ್, ದಿಶಾ ಸಮಿತಿ ಸದಸ್ಯ ನರಸನಾಯಕ, ಟಿಎಪಿಸಿಎಂಎಸ್ ನಿರ್ದೇಶಕ ಟಿ.ಬಲದೇವ್, ಮುಖಂಡರಾದ ಚೌಡೇನಹಳ್ಳಿ ರವಿ, ತಾಲೂಕು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರೇಖಾ ಲೋಕೇಶ್, ಟೌನ್ ಘಟಕದ ಅಧ್ಯಕ್ಷೆ ಎಂ.ಕೆ.ರತಿ, ಕಿಕ್ಕೇರಿ ಜಯಲಕ್ಷ್ಮಿ, ತಾಲೂಕು ಪಶು ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ.ದೇವರಾಜು ಇದ್ದರು.ಸಾಲ ಪಡೆಯಲು ಬ್ಯಾಂಕ್ಗಳಲ್ಲಿ ಅನಾನುಕೂಲ ರೈತರ ಆಕ್ರೋಶ
ಸಾಲ ಪಡೆಯಲು ಬ್ಯಾಂಕ್ಗಳಿಂದ ಆಗುತ್ತಿರುವ ಅನಾನುಕೂಲದ ಬಗ್ಗೆ ಫಲಾನುಭವಿ ರೈತರು ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜರುಗಿತು.
ನಾನು ಈಗಾಗಲೇ 50 ಕುರಿಗಳನ್ನು ಸಾಕುತ್ತಿದ್ದೇನೆ. ಆದರೆ, ಕನ್ನಡ ಬಾರದ ಬ್ಯಾಂಕ್ ಮ್ಯಾನೇಜರ್ ನನ್ನ ಸಾಲದ ಅರ್ಜಿಯನ್ನು ಪರಿಗಣಿಸುತ್ತಿಲ್ಲ ಎಂದು ರೈತ ಚಿಕ್ಕಗಾಡಿಗನಹಳ್ಳಿ ಸೋಮಶೇಖರ್ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದರು.