ಉದ್ಯೋಗ ಚೀಟಿ ಪರಿಷ್ಕರಣೆ, ಸ್ತ್ರೀ ಚೇತನ ಅಭಿಯಾನಕ್ಕೆ ಚಾಲನೆಕನ್ನಡಪ್ರಭ ವಾರ್ತೆ ಹರಪನಹಳ್ಳಿ
ಇಲ್ಲಿನ ತಾಲೂಕು ಪಂಚಾಯಿತಿಯ ರಾಜೀವಗಾಂಧಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಉದ್ಯೋಗ ಚೀಟಿ ಪರಿಷ್ಕರಣೆ ಹಾಗೂ ಸ್ತ್ರೀಚೇತನ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿಯೊಬ್ಬಅರ್ಹ ಫಲಾನುಭವಿಗೆ ಜಾಬ್ಕಾರ್ಡ್ ವಿತರಿಸಿ, ಯೋಜನೆಯ ಎಲ್ಲ ಸೌಲಭ್ಯಗಳು ಅವರಿಗೆ ದೊರಕಬೇಕು. ಇದರಲ್ಲಿ ನರೇಗಾ ಸಿಬ್ಬಂದಿ ಶ್ರಮ ಸಾಕಷ್ಟು ಇರುತ್ತದೆ ಎಂದು ಅವರು ಹೇಳಿದರು.ನರೇಗಾ ಯೋಜನೆಯಡಿ ಈಗಾಗಲೇ ಅರ್ಹ ಕುಟುಂಬಗಳಿಗೆ ವಿತರಿಸಲಾದ ಉದ್ಯೋಗ ಚೀಟಿಗಳಲ್ಲಿ ಕೂಲಿಕಾರರ ಹೆಸರು, ವಯಸ್ಸು, ಕೆಟಗರಿ, ಬ್ಯಾಂಕ್ ಖಾತೆ ವಿವರ, ಆಧಾರ್ ಸಂಖ್ಯೆ, ಭಾವಚಿತ್ರ ಇತ್ಯಾದಿ ವಿವರಗಳನ್ನ ತಪ್ಪಾಗಿ ನಮೂದಿಸಿದ್ದರಿಂದ ಕೂಲಿಕಾರರಿಗೆ ಸಮರ್ಪಕವಾಗಿ ಕೆಲಸ ನೀಡಲು ಸಾಧ್ಯವಾಗುತ್ತಿಲ್ಲ. ಕೆಲಸ ನೀಡಿದರೂ ಕೂಲಿ ಹಣ ಪಾವತಿಯಲ್ಲಿ ವ್ಯತ್ಯಯವಾಗುತ್ತದೆ. ಹೀಗಾಗಿ ಈ ಏಪ್ರಿಲ್ ತಿಂಗಳಲ್ಲಿ ತಂತ್ರಾಂಶದಲ್ಲಿ ಸರಿಯಾದ ಮಾಹಿತಿ ದಾಖಲಿಸಲು ಅವಕಾಶ ಇದೆ. ಇದನ್ನು ಅತೀ ಶೀಘ್ರ ಮುಗಿಸಲು ಎಲ್ಲ ಗ್ರಾಮ ಪಂಚಾಯಿತಿಯಲ್ಲಿ ಈ ಅಭಿಯಾನ ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾ, ತಾಲೂಕು, ಗ್ರಾಪಂ ಮಟ್ಟದ ತಂಡಗಳ ರಚನೆ:
ಅಭಿಯಾನದ ಪ್ರಗತಿಯ ಮೇಲ್ವಿಚಾರಣೆ ಮಾಡಲು ವಿವಿಧ ಹಂತಗಳಲ್ಲಿ ಅಧಿಕಾರಿ/ಸಿಬ್ಬಂದಿಗಳನ್ನು ಒಳಗೊಂಡ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದರು.ಈ ಸಂದರ್ಭ ಪಂಚಾಯತ್ರಾಜ್ ಸಹಾಯಕ ನಿರ್ದೇಶಕ ವೀರಣ್ಣ ಲಕ್ಕಣ್ಣನವರ್, ಐಇಸಿ ಸಂಯೋಜಕ ಕೆ.ವಸಿಗೇರಪ್ಪ ಚಾಗನೂರು, ತಾಂತ್ರಿಕ ಸಂಯೋಜಕ ನಾಗರಾಜ ನಾಯ್ಕ, ಎಂಐಎಸ್ ಸಂಯೋಜಕ ಮೈಲಾರಿಗೌಡ ಸೇರಿದಂತೆ ತಾಂತ್ರಿಕ ಸಹಾಯಕ ಅಭಿಯಂತರರು, ಬಿಎಫ್ಟಿಗಳು, ಗ್ರಾಮಕಾಯಕ ಮಿತ್ರರು, ತಾಂಡಾ ರೋಜಗಾರ್ ಮಿತ್ರರು ಇದ್ದರು.