ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೋಮವಾರ ಮಾತನಾಡಿದ ಅವರು, ಕುಡಿಯುವ ನೀರು, ಘನತ್ಯಾಜ ನಿರ್ವಹಣೆ, ಕೆರೆಗಳ ಸಂರಕ್ಷಣೆ ಸೇರಿ ವಿವಿಧ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು,ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಾಲಕಾಲಕ್ಕೆ ಒದಗಿಸಲು ಸ್ವಂತ ಸುಪ್ರೀಂ ಕೋರ್ಟ್ನ ನಿರ್ದೇಶನವಿದ್ದು, ಸಂಬಂಧಿಸಿದ ಅಧಿಕಾರಿಗಳು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳು ಒದಗಿಸುವ ಮೂಲಕ ಜನರಿಗೆ ವಿವಿಧ ಸೌಲಭ್ಯಗಳನ್ನು ನೀಡುವ ವಾತಾವರಣವನ್ನು ನಿರ್ಮಾಣ ಮಾಡಲು ಅಧಿಕಾರಿಗಳು ಶ್ರಮಿಸಬೇಕು. ಜನರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಕಾಲಕಾಲಕ್ಕೆ ಒದಗಿಸಬೇಕೆಂದರು.
ಜಿಲ್ಲೆಯಲ್ಲಿ ಮರಳುಗಾರಿಕೆ, ಅರಣ್ಯ ಸಂರಕ್ಷಣೆ ಹಾಗೂ ಗ್ರಾಮೀಣ ಭಾಗದ ಅಂಗಡಿ ಹಾಗೂ ಪಾನ್ ಬೀಡಾ ಅಂಗಡಿಗಳಲ್ಲಿ ಮದ್ಯ ಮಾರಾಟದ ಕುರಿತು ನಿಗಾ ನಿರ್ವಹಿಸಬೇಕು. ಆಕ್ರಮ ಮದ್ಯ ಮಾರಾಟದ ಮೇಲೆ ಸಂಬAಧಿಸಿದ ಅಧಿಕಾರಿಗಳು ಕೂಡಲೇ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತರು ಸೂಚನೆ ನೀಡಿದರು.ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಈ ಹಿಂದೆ ಸರ್ಕಾರದಿಂದ ಮಹತ್ವ ಯೋಜನೆ ಕೈಗೊಳ್ಳಲಾಗಿದೆ. ಮಳೆ ಬರದೆ ಇರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಆರ್.ಓ ಪಾಂಟ್ಲ್ ಸಲುವಾಗಿ ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಪ್ರಸ್ತುತ ಶೇ.50ರಷ್ಟು ಆರ್.ಓ ಪ್ಲಾಂಟ್ಗಳು ಸರಿಯಾಗಿ ನಿರ್ವಹಣೆ ಇಲ್ಲದೆ ಹಾಳಾಗಿವೆ. ಅವುಗಳನ್ನು ಸರಿಪಡಿಸಬೇಕು. ರಾಯಚೂರು ಜಿಲ್ಲೆಯ 811 ಹಳ್ಳಿಗಳ ಪೈಕಿ ಸುಮಾರು 700 ಹಳ್ಳಿಗಳಲ್ಲಿ ಆರ್.ಓ ಪ್ಲಾಂಟ್ ನೀಡಲಾಗಿದೆ. ದೇವದುರ್ಗ ಹಾಗೂ ಮಾನ್ವಿ ತಾಲ್ಲೂಕಿನ ಹಳ್ಳಿಗಳಲ್ಲಿ ಜನರಿಗೆ ಶುದ್ಧ ನೀರು ಸಿಗದ ಕಾರಣ ಆರೋಗ್ಯದ ಸಮಸ್ಯೆ ಎದುರಾದ ಕುರಿತು ಲೋಕಾಯುಕ್ತರಿಂದ ಸ್ವಯಂ ಪ್ರಕರಣಗಳು ದಾಖಲಿಸಲಾಗಿದೆ ಎಂದು ತಿಳಿಸಿದರು.
ನಗರದ ಸ್ವಚ್ಛತೆ ಕುರಿತು ಪ್ರತಿಯೊಬ್ಬ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಬೇಕು. ಮನೆಯ ಸ್ವಚ್ಛತೆ ಯಂತೆಯೇ, ನಗರ ಸ್ವಚ್ಛತೆಗೂ ಆದ್ಯತೆಯ ಮೇಲೆ ಪ್ರಾಮುಖ್ಯತೆ ನೀಡಲು ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬ ನಾಗರಿಕರು ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದರು.