ಹಾವೇರಿ: ಹಾವೇರಿ ವಿಶ್ವವಿದ್ಯಾಲಯವನ್ನು ವಿಲೀನಗೊಳಿಸುವ ಅಥವಾ ಮುಚ್ಚುವ ಪ್ರಕ್ರಿಯೆ ರದ್ದುಪಡಿಸಲು ಹಾಗೂ ವಿವಿಗೆ ಅಗತ್ಯ ಅನುದಾನ ಒದಗಿಸುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಾವೇರಿ ವಿವಿ ಉಳಿಸಿ ಹೋರಾಟ ಸಮಿತಿ ಮನವಿ ಸಲ್ಲಿಸಿತು.
ಆದರೆ ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವರ ಹೇಳಿಕೆಗಳು ಆತಂಕ ಉಂಟು ಮಾಡಿವೆ. ವಿವಿಗಳನ್ನು ಮುಚ್ಚದೇ ಬದಲಾಗಿ ವಿಲೀನಗೊಳಿಸುತ್ತೇವೆ ಎಂಬುದು ಆತಂಕವನ್ನುಂಟು ಮಾಡಿದೆ. ಇದು ರಾಜ್ಯದ ಜನರಲ್ಲಿ ಗೊಂದಲವನ್ನುಂಟು ಮಾಡುತ್ತಿವೆ. ಹಾವೇರಿ ವಿವಿ ಮುಚ್ಚುವ ರಾಜ್ಯ ಸರ್ಕಾರದ ತೀರ್ಮಾನದಿಂದ ನಮ್ಮ ಹಾವೇರಿ ಜಿಲ್ಲೆಯ ಬಡ, ಮಧ್ಯಮ ವರ್ಗದ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳಿಗೆ ಉನ್ನತ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಾರೆ. ಅವರೆಲ್ಲರೂ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂಬುದನ್ನು ಸರ್ಕಾರ ಅರಿಯಬೇಕೆಂದು ಒತ್ತಾಯಿಸಿದರು.
ಈ ವೇಳೆ ಸಾಹಿತಿ ಸತೀಶ ಕುಲಕರ್ಣಿ, ಹೊನ್ನಪ್ಪ ಮರೆಮ್ಮನವರ, ಪರಿಮಳ ಜೈನ್, ಆಂಜನೇಯ ಇತರರು ಇದ್ದರು. ರಕ್ತದಾನದಿಂದ ದೇಶ, ದೇಹದ ರಕ್ಷಣೆರಾಣಿಬೆನ್ನೂರು: ಯುವ ಜನತೆ ರಕ್ತದಾನ ಮಾಡುವುದರಿಂದ ದೇಶ ಹಾಗೂ ದೇಹದ ರಕ್ಷಣೆಯಾಗುತ್ತದೆ ಎಂದು ಬಿಎಜೆಎಸ್ಎಸ್ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಡಾ. ಆರ್.ಎಂ.ಕುಬೇರಪ್ಪ ಹೇಳಿದರು.ನಗರದ ಬಿಎಜೆಎಸ್ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಹಾವೇರಿ ಜಿಲ್ಲಾ ರಕ್ತ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.ಜಿಲ್ಲಾ ರಕ್ತ ಕೇಂದ್ರದ ವೈದ್ಯಾಧಿಕಾರಿ ಡಾ. ಬಸವರಾಜ ತಳವಾರ ಮಾತನಾಡಿ, ರಕ್ತದಾನದಿಂದ ದಾನಿಯ ಆರೋಗ್ಯದಲ್ಲಿ ನವಚೈತನ್ಯ ಉಂಟಾಗುತ್ತದೆ ಹಾಗೂ ಕೋಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ ಎಂದರು.