ಕನ್ನಡಪ್ರಭ ವಾರ್ತೆ, ಚಾಮರಾಜನಗರ
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಒಳ ಮೀಸಲಾತಿ ನೀಡುವ ಸಂಬಂಧ ಸಮೀಕ್ಷೆಯಲ್ಲಿ ಭಾಗವಹಿಸಿ, ನಿಖರವಾದ ಮಾಹಿತಿ ನೀಡಿದ್ದೀರಿ. ಜಾತಿ ಸಮೀಕ್ಷೆಯಲ್ಲಿ ಸಮೀಕ್ಷೆದಾರರಿಗೆ ಪೂರಕವಾದ ಮಾಹಿತಿ ನೀಡಬೇಕು. ಜಾತಿ, ಧರ್ಮವನ್ನು ಸ್ಪಷ್ಟವಾಗಿ ನಮೂಸಿದರೆ ಮುಂದಿನ ದಿನಗಳಲ್ಲಿ ನಮ್ಮ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ, ಸೌಲಭ್ಯ ದೊರೆಯಲು ಸಹಕಾರಿಯಾಗುತ್ತದೆದೆ ಎಂದು.
೮. ಧರ್ಮ ಕಾಲಂನಲ್ಲಿ ಬೌದ್ಧ, ೯ ಜಾತಿ ಕಾಲಂನಲ್ಲಿ ಪರಿಶಿಷ್ಟ ಜಾತಿ ಹಾಗೂ ೧೦ ಉಪ ಜಾತಿ ಕಾಲಂನಲ್ಲಿ ಹೊಲಯ (೦೪೪೧) ಎಂದು ನಮೂದಿಸಬೇಕು. ೬೦ ಪ್ರಶ್ನೆಗಳಿಗೆ ನಿಖರ ಉತ್ತರ ನೀಡಬೇಕು. ಆನ್ಲೈನ್ನಲ್ಲಿ ಭರ್ತಿಯಾಗುವುದರಿಂದ ಯಾವುದೇ ಮೋಸವಾಗುವುದಿಲ್ಲ ಎಂದರು.ಬೌದ್ಧ ಧರ್ಮ ಬರೆಸಿದರೆ ಮೀಸಲಾತಿ ಹೋಗಲ್ಲ:
ಸೆ. ೩೦ ರಂದು ಜಿಲ್ಲಾ ಮಟ್ಟದ ಕಾರ್ಯಾಗಾರ:
ಜಾತಿ ಗಣತಿಯಲ್ಲಿ ಸರಿಯಾಗಿ ಧರ್ಮ, ಜಾತಿ ಹಾಗೂ ಉಪ ಜಾತಿಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಬಲಗೈ ಜಾತಿಗಳ ಒಕ್ಕುಟದಿಂದ ಸೆ. ೩೦ರ ಮಂಗಳವಾರ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ನಗರದ ಡಾ. ಬಿ.ಆರ್. ಅಂಭೇಡ್ಕರ್ ಭವನದಲ್ಲಿ ಆಯೋಜನೆ ಮಾಡಲಾಗಿದೆ.ಬೆಳಗ್ಗೆ ೧೧ ಗಂಟಗೆ ನಡೆಯುವ ಕಾರ್ಯಾಗಾರದ ಸಾನ್ನಿಧ್ಯವನ್ನು ಮೈಸೂರಿನ ಉರಿಲಿಂಗಿ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶಸ್ವಾಮೀಜಿ ವಹಿಸಲಿದ್ದರು, ಜಿಲ್ಲೆಯಲ್ಲಿ ಶಾಸಕರಾದ ಎ.ಆರ್. ಕೃಷ್ಣಮುರ್ತಿ, ಮಾಜಿ ಸಚಿವ ಎನ್. ಮಹೇಶ್, ಮಾಜಿ ಶಾಸಕ ರಾದ ಎಸ್. ಬಾಲರಾಜು, ಜಿ.ಎನ್. ನಂಜುಂಡಸ್ವಾಮಿ ಸೇರಿದಂತೆ ಅನೇಕ ಪ್ರಮುಖರು, ದಲಿತ ಮುಖಂಡರು, ಸಂಘಟನೆಗಳ ಪ್ರಮುಖರು ಭಾಗವಹಿಸಲಿದ್ದಾರೆ. ಜಿಲ್ಲೆಯ ಗಡಿ ಗಟ್ಟೆ ಯಜಮಾನರು, ಮುಖಂಡರು ಹಾಗೂ ಅಂಬೇಡ್ಕರ್ ಸಂಘಗಳ ಪದಾಧಿಕಾರಿಗಳು ಭಾಗವಹಿಸಬೇಕೆಂದು ಅಯ್ಯನಪುರ ಶಿವಕುಮಾರ್ ತಿಳಿಸಿದರು.
ಅರುಣ್ಕುಮಾರ್ಗೆ ಘೇರಾವ್ ಮಾಡುವ ಎಚ್ಚರಿಕೆ : ಮನುವಾದಿಗಳು ಮಾತಿನಿಂದಂತೆ ಜಿಲ್ಲೆಯಲ್ಲಿ ಬಂತು ಬಾಯಿಗೆ ಬಂದಂತೆ ಮಾತನಾಡುವ ವಕೀಲ ಅರುಣ್ಕುಮಾರ್, ಭಾಸ್ಕರ್ ಸುಳ್ಳು ಹೇಳಿ, ಬೌದ್ಧ ಧರ್ಮ ನೇಪಾಳದ್ದು ಎಂದು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದರ ವಿರುದ್ದ ಬಲಗೈ ಸಮುದಾಯವರು ಅವರನ್ನು ಘೇರಾವ್ ಮಾಡಬೇಕಾಗುತ್ತದೆ ಎಂದು ಗ್ಯಾರಂಟಿ ಯೋಜನೆಯ ಸಮಿತಿ ತಾಲೂಕು ಅಧ್ಯಕ್ಷ ನಲ್ಲೂರು ಸೋಮೇಶ್ವರ ಎಚ್ಚರಿಕೆ ನೀಡಿದರು.ಹೆಬ್ಬಸೂರು ರಂಗಸ್ವಾಮಿ, ಸಿದ್ದಯ್ಯನಪುರ ಗೋವಿಂದರಾಜು, ವೆಂಕಟಯ್ಯನಛತ್ರ ಸೋಮಣ್ಣ, ನಗರಸಭಾ ಸದಸ್ಯ ಆರ್.ಪಿ. ನಂಜುಂಡಸ್ವಾಮಿ, ನಲ್ಲೂರು ಮಹದೇವಸ್ವಾಮಿ ಇದ್ದರು.