ಕನ್ನಡಪ್ರಭ ವಾರ್ತೆ ಕಾರವಾರ
ಕಾರವಾರ ಹಾಗೂ ಅಂಕೋಲಾದಲ್ಲಿ ಭಾನುವಾರ ನಡೆದ ಎಸ್ಐಆರ್ ಭಾಗ- 2 ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಎಸ್ಐಆರ್ ಫಾರ್ಮ ಭರ್ತಿ ಮಾಡಿಕೊಟ್ಟ ಮೇಲೆ ನಮ್ಮ ಕರ್ತವ್ಯ ಮುಗಿದಿಲ್ಲ. ಈಗ ಎರಡನೇ ಹಂತ ಇದೆ. ಮತದಾರರ ಯಾದಿಯಲ್ಲಿ ತಪ್ಪಿ ಹೋಗಿರುವ ಅರ್ಹ ಮತದಾರರನ್ನು ಗುರುತಿಸಿ ಅವರನ್ನು ಪಟ್ಟಿಗೆ ಸೇರ್ಪಡೆ ಮಾಡುವಂತೆ ಮಾಡಲು ಅ.8 ರ ತನಕ ಕಾಲಾವಕಾಶ ಇದೆ. ಹೀಗಾಗಿ ಪ್ರತಿಯೊಬ್ಬರೂ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಹೇಳಿದರು.ಕೆಲವು ಅರ್ಹರು ಹಿಂದೆ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ. ಈಗ ಹಬ್ಬಗಳು ಇರುವುದರಿಂದ ಅವರು ಊರಿಗೆ ಬರಬಹುದು. ಹಾಗೆ ಬಂದಾಗ ಅವರನ್ನು ಸಂಪರ್ಕಿಸಿ ಮತದಾನದ ಹಕ್ಕನ್ನು ಅವರಿಗೆ ಒದಗಿಸಿಕೊಡಬೇಕು ಎಂದು ರೂಪಾಲಿ ಎಸ್.ನಾಯ್ಕ ವಿನಂತಿಸಿದರು.
ಬಿಎಲ್ ಎ 1 ರಾಘು ಭಟ್ ಮಾತನಾಡಿ, ಮುಂದಿನ ಹಂತದಲ್ಲಿ ಬಿಎಲ್ ಎ 2 ಗಳ ಜವಾಬ್ದಾರಿ ಬಗ್ಗೆ ವಿವರಿಸಿದರು. ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಅಧ್ಯಕ್ಷರು, ಬಿಎಲ್ ಎ 2 ಗಳು ಉಪಸ್ಥಿತರಿದ್ದರು.
ಗ್ರಾಮೀಣ ಅಧ್ಯಕ್ಷ ಸುಭಾಷ್ ಗುನಗಿ, ನಗರ ಅಧ್ಯಕ್ಷ ನಾಗೇಶ್ ಕುರಡೇಕರ್, ರಾಜ್ಯ ಪ್ರಕೋಷ್ಠ ಸದಸ್ಯ ಸುನಿಲ್ ಸೋನಿ, ನಗರ ಪ್ರಭಾರಿ ರಾಜು ಭಂಡಾರಿ, ಜಿಲ್ಲಾ ಮಾಧ್ಯಮ ಸಹ ಸಂಚಾಲ ಕಿಶನ ಕಾಂಬಳೆ, ಮನೋಜ್ ಭಟ್, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅಶೋಕ ಗೌಡ ಸ್ವಾಗತಿಸಿದರು ಗ್ರಾಮೀಣ ಮಂಡಲ ಪ್ರಧಾನ ಕಾರ್ಯದರ್ಶಿ ಉದಯ ನಾಯ್ಕ್ ವಂದಿಸಿದರು.