ಕಂಪ್ಲಿ; ಪಟ್ಟಣದಲ್ಲಿ ಜೆಸಿಐ ಅಲೂಮ್ನಿ ಕ್ಲಬ್ನಿಂದ ಹಮ್ಮಿಕೊಂಡಿದ್ದ ಪಕ್ಷಿಗಳಿಗೆ ನೀರುಣಿಸುವ ಅಭಿಯಾನ ಗುರುವಾರ ಜರುಗಿತು.
ಪರಿಸರ ಸಂರಕ್ಷಣೆ ಮತ್ತು ಜೀವಿಗಳ ಮೇಲಿನ ಕಾಳಜಿಯನ್ನು ಬೆಳೆಸುವ ಉದ್ದೇಶದಿಂದ ಜೆಸಿಐ ಅಲ್ಯೂಮ್ನಿ ಕ್ಲಬ್ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಅಭಿಯಾನದ ಭಾಗವಾಗಿ ಪಟ್ಟಣದ ವಿವಿಧ ಸರ್ಕಾರಿ ಹಾಗೂ ಸಾರ್ವಜನಿಕ ಕಚೇರಿಗಳ ಆವರಣದಲ್ಲಿ ಪಕ್ಷಿಗಳಿಗೆ ನೀರು ಕುಡಿಯಲು ಮಣ್ಣಿನ ಕುಂಡಗಳನ್ನು ಇರಿಸಲಾಯಿತು. ಮುಂದಿನ ದಿನಗಳಲ್ಲಿ ಇನ್ನಷ್ಟು ಕಡೆಗಳಲ್ಲಿ ನೀರಿನ ಕುಂಡಗಳನ್ನು ವಿತರಿಸುವ ಯೋಜನೆ ಇದೆ ಎಂದು ತಿಳಿಸಿದರು.
ಪಟ್ಟಣದ ಪ್ರಜಾಪತಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಎಪಿಎಂಸಿ ಆವರಣ, ತಾಪಂ ಕಚೇರಿ, ಡಿಪ್ಲೋಮಾ ಕಾಲೇಜು, ಪುರಸಭೆ ಸೇರಿದಂತೆ ವಿವಿಧ ಪ್ರಮುಖ ಕಟ್ಟಡಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪಕ್ಷಿಗಳಿಗಾಗಿ ನೀರಿನ ಕುಂಡಗಳನ್ನು ಅಳವಡಿಸಲಾಯಿತು.ಜೆಸಿಐ ಕಂಪ್ಲಿ ಸೋನಾದ ಅಧ್ಯಕ್ಷ ಡಾ.ಭರತ್ ಪದ್ಮಶಾಲಿ ಮಾತನಾಡಿ, ಪರಿಸರ ಮತ್ತು ಜೀವ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ತಮ್ಮದೇ ಆದ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕು ಎಂದರು.