ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ವೀರೇಂದ್ರ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಜಾತ್ರಾ ಮಹೋತ್ಸವದಲ್ಲಿ ಬಂದೋಬಸ್ತ್ ಕರ್ತವ್ಯದಲ್ಲಿ ತೊಡಗಿದ್ದರು. ಎತ್ತಿನ ಗಾಡಿ ವೇಗ ಬರುತ್ತಿದ್ದರಿಂದ ರಸ್ತೆ ಬದಿಯಲ್ಲಿ ನಿಂತ ಭಕ್ತರು ಮತ್ತು ಸಾರ್ವಜನಿಕರನ್ನು ಹಿಂದಕ್ಕೆ ಸರಿಸುವುದಕ್ಕೆ ಮುಂದಾಗಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಎತ್ತಿನ ಬಂಡಿಯ ನೊಗ ಬಡಿದು ವಿರೇಂದ್ರ ಕೆಳಗೆ ಬಿದ್ದಿದ್ದಾರೆ. ಮೇಲೇಳುವ ಮೊದಲು ಮತ್ತೊಂದು ಎತ್ತಿನ ಬಂಡಿಯ ಚಕ್ರ ಮೈ ಮೇಲೆ ಹರಿದು ಹೋಗಿದೆ.
ಈ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ತಲೆಗೆ ಪೆಟ್ಟಾಗಿದೆ. ತಕ್ಷಣ ಪಟ್ಟಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.