ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಸಿಎನ್ಸಿ ವತಿಯಿಂದ ಶ್ರೀಮಂಗಲದಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.
ಗಣೇಶೋತ್ಸವ, ದಸರಾ, ಹಾಕಿ ಉತ್ಸವ, ದೇವಾಲಯಗಳ ಹಬ್ಬಗಳಿಗೆ ದೇಣಿಗೆ ನೀಡುತ್ತಿರುವ ಭೂಮಾಫಿಯಾಗಳು ದಾನ, ಧರ್ಮ, ಪರಿಸರ ಸಂರಕ್ಷಣೆಯ ನಾಟಕವಾಡುತ್ತಿದ್ದಾರೆ. ಜನರ ಗಮನವನ್ನು ಬೇರೆಡೆ ಸೆಳೆಯಲು ಸಮಾಜಸೇವೆಯ ಮುಖವಾಡ ತೊಟ್ಟುಕೊಂಡಿದ್ದಾರೆ. ಈ ನಯವಂಚಕತನದ ಷಡ್ಯಂತ್ರವನ್ನು ಸಿಎನ್ಸಿ ಸಂಘಟನೆ ಹೋರಾಟದ ಮೂಲಕ ಬಯಲು ಮಾಡಲಿದೆ ಎಂದರು.ಮಾಫಿಯಾಗಳು ನೀಡುವ ಆಮಿಷಗಳನ್ನು ತಿರಸ್ಕರಿಸಿ ಭೂಅಕ್ರಮಗಳ ವಿರುದ್ಧ ಕೊಡವರು ಜಾಗೃತರಾಗದಿದ್ದಲ್ಲಿ ಕೊಡವ ಲ್ಯಾಂಡ್ ನ್ನು ಕಳೆದುಕೊಳ್ಳುವ ಹೀನಾಯ ಸ್ಥಿತಿ ಬರಬಹುದೆಂದು ಎನ್.ಯು.ನಾಚಪ್ಪ ಬೇಸರ ವ್ಯಕ್ತಪಡಿಸಿದರು.
ಜನಜಾಗೃತಿ ಮಾನವ ಸರಪಳಿಯಲ್ಲಿ ಪಾಲ್ಗೊಂಡಿದ್ದ ಸಿಎನ್ಸಿ ಪ್ರಮುಖರು ಹಾಗೂ ಗ್ರಾಮಸ್ಥರು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ನಿರ್ಣಯ ಕೈಗೊಂಡು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಅಜ್ಜಮಾಡ ಸಾವಿತ್ರಿ, ಅಜ್ಜಮಾಡ ಸುಮಾ, ಚೊಟ್ಟೆಯಂಡಮಾಡ ಪಾರ್ವತಿ, ಚೆಂಗುಲಂಡ ರಾಜಪ್ಪ, ಚೆಂಗುಲಂಡ ರ್ಯಾಲಿ, ಅಜ್ಜಮಾಡ ಮೋಹನ್, ಅಜ್ಜಮಾಡ ಇಮ್ಮಿ, ಅಜ್ಜಮಾಡ ಚೆಂಗಪ್ಪ, ಮಾಣೀರ ಮುತ್ತಪ್ಪ, ಬಾದುಮಂಡ ರಾಜಪ್ಪ, ಚೋಟ್ಟೆಯಂಡಮಾಡ ತಿಮ್ಮಯ್ಯ, ಕಾಳಿಮಾಡ ಹರೀಶ್ ಮತ್ತಿತರರು ಇದ್ದರು.