ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಕರಡಹಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ದೊಡ್ಡಯಗಟಿ ಹಾಗೂ ಗ್ರಾಪಂನಿಂದ ವೈದ್ಯಾಧಿಕಾರಿ ನಾರಾಯಣ ಮಾರ್ಗದರ್ಶನದಲ್ಲಿ ನಡೆದ ಡೆಂಘೀ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಡೆಂಘೀ ನಿರ್ಮೂಲನೆಗೆ ಮನೆಯಲ್ಲಿ ಸುತ್ತಮುತ್ತಲಿನ ಪರಿಸರದಲ್ಲಿ ನಿಂತ ನೀರನ್ನು ತೆರವುಗೊಳಿಸಬೇಕು. ಹಗಲು ವೇಳೆ ಈಡೀಸ್ ಈಜಿಪ್ಟಿ ಎಂಬ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಜ್ವರ ಬರುತ್ತದೆ. ನಾಗರಿಕರು ಮುನ್ನೆಚ್ಚರಿಕೆ ವಹಿಸಿದರೆ ಜ್ವರ ಬರದಂತೆ ತಡೆಯಬಹುದು ಎಂದರು.ಕಾರ್ಯಕ್ರಮದಲ್ಲಿ ಗ್ರಾಪಂ ಪಿಡಿಒ ವಿಜಯಲಕ್ಷ್ಮಿ, ಶಾಲಾ ಶಿಕ್ಷಕರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ ಸದಸ್ಯರು ಇದ್ದರು.
ಭಾರತೀನಗರ:
ಶಾಲೆಯ ನೂರಾರು ವಿದ್ಯಾರ್ಥಿಗಳು ಮದ್ದೂರು-ಮಳವಳ್ಳಿ ಹೆದ್ದಾರಿಯ ಮೂಲಕ ಡೆಂಘೀ ಜ್ವರವನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿಸುವಂತೆ ಘೋಷಣೆ ಕೂಗುತ್ತ ಜಾಗೃತಿ ಮೂಡಿಸಿದರು.
ಶಾಲೆ ಮುಖ್ಯಸ್ಥೆ ನಾಗರತ್ನ ಬಲ್ಲೇಗೌಡ, ಮುಖ್ಯಶಿಕ್ಷಕಿ ಆಯೆಷಾ ಮಾತನಾಡಿದರು. ಇದೇ ವೇಳೆ ಶಾಲೆ ಸಂಸ್ಥಾಪಕ ಅಧ್ಯಕ್ಷ ಎ.ಟಿ.ಬಲ್ಲೇಗೌಡ, ಶಿಕ್ಷಕರಾದ ನವೀನ್, ಕರುಣಾಮೂರ್ತಿ, ತಾರಾ, ವಿಶ್ವ, ನಟರಾಜು, ನಿರ್ಮಲ, ಲೀಲಾವತಿ, ದಿವ್ಯ, ಮಂಜುನಾಥ್, ಮೀನಾಕ್ಷಿ, ಆಶಾ, ಸಿದ್ದರಾಮು, ಗೌತಮಿ, ನೇತ್ರಾವತಿ ಸೇರಿದಂತೆ ಹಲವರಿದ್ದರು.