ತಂಬಾಕು ಸೇವನೆ ವಿರುದ್ಧ ಜನಜಾಗೃತಿ ಮೂಡಿಸಬೇಕು

KannadaprabhaNewsNetwork |  
Published : Nov 07, 2025, 01:15 AM IST

ಸಾರಾಂಶ

ತಂಬಾಕು ವ್ಯಸನಕ್ಕೆ ಒಳಗಾಗಿ ಜನರು ಅನೇಕ ಕಾಯಿಲೆಗಳಿಗೆ ತುತ್ತಾಗುವ ಮುಖಾಂತರ ಪ್ರತಿ ವರ್ಷ ಭಾರತದಲ್ಲಿ ೧೦ ಲಕ್ಷಕ್ಕಿಂತ ಹೆಚ್ಚಿನ ಸಾವುಗಳು ಸಂಭವಿಸುತ್ತಿವೆ, ಯುವಜನರಲ್ಲಿ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತ ಸರ್ಕಾರದ ಆರೋಗ್ಯ-ಕುಟುಂಬ ಕಲ್ಯಾಣ ಸಚಿವಾಲಯವು ೬೦ ದಿನಗಳ ತಂಬಾಕು ಮುಕ್ತ ಯುವ ಅಭಿಯಾನ ಆರಂಭಿಸಿದೆ

ಕನ್ನಡಪ್ರಭ ವಾರ್ತೆ ಕೋಲಾರತಂಬಾಕು ಸೇವನೆ ಮತ್ತು ಧೂಮಪಾನದಿಂದ ದೇಹದಲ್ಲಿ ಕ್ಯಾನ್ಸರ್‌ಕಾರಕ ಜೀವಕೋಶಗಳು ಉತ್ಪತ್ತಿಯಾಗುತ್ತಾ ಕ್ಯಾನ್ಸರ್ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಧ್ಯಕ್ಷತೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ತಂಬಾಕು ನಿಯಂತ್ರಣ ಮತ್ತು ಕೋಟ್ಪಾ ಕಾಯ್ದೆಯ ಅನುಷ್ಠಾನದ ಕುರಿತಂತೆ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯಲ್ಲಿ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ತಂಬಾಕು ಮುಕ್ತ ಯುವ ಅಭಿಯಾನ ೩.೦ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿ ವರ್ಷ 10 ಲಕ್ಷ ಮದಿ ಸಾವು

ತಂಬಾಕು ವ್ಯಸನಕ್ಕೆ ಒಳಗಾಗಿ ಜನರು ಅನೇಕ ಕಾಯಿಲೆಗಳಿಗೆ ತುತ್ತಾಗುವ ಮುಖಾಂತರ ಪ್ರತಿ ವರ್ಷ ಭಾರತದಲ್ಲಿ ೧೦ ಲಕ್ಷಕ್ಕಿಂತ ಹೆಚ್ಚಿನ ಸಾವುಗಳು ಸಂಭವಿಸುತ್ತಿವೆ, ಯುವಜನರಲ್ಲಿ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತ ಸರ್ಕಾರದ ಆರೋಗ್ಯ-ಕುಟುಂಬ ಕಲ್ಯಾಣ ಸಚಿವಾಲಯವು ೬೦ ದಿನಗಳ ತಂಬಾಕು ಮುಕ್ತ ಯುವ ಅಭಿಯಾನ ಆರಂಭಿಸಿದೆ ಎಂದು ಅವರು ಹೇಳಿದರು.

ಯುವಜನರು ತಂಬಾಕು ಸೇವನೆಯ ವ್ಯಸನಕ್ಕೆ ತುತ್ತಾಗುವುದನ್ನು ತಡೆಯುವುದು ಮತ್ತು ಈಗಾಗಲೇ ತಂಬಾಕು ಉತ್ಪನ್ನಗಳನ್ನು ಬಳಸಲು ಪ್ರಾರಂಭಿಸಿರುವವರು ವ್ಯಸನ ಬಿಡಲು ಪ್ರೇರೇಪಿಸುವುದು ಅಭಿಯಾನದ ಉದ್ದೇಶ ಎಂದರು.

ಸಂಬಾಕಿನಿಂದ ಕ್ಯಾನ್ಸರ್‌

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ್ ಮಾತನಾಡಿ, ತಂಬಾಕು ಉತ್ಪನ್ನಗಳ ಸೇವನೆಯಿಂದ ಅನೇಕ ಅಸಾಂಕ್ರಾಮಿಕ ರೋಗಗಳಿಗೆ ಪ್ರಮುಖ ಕಾರಣವಾಗಿದೆ. ಶೇ.೨೨ ಕ್ಯಾನ್ಸರ್ ರೋಗಗಳು ತಂಬಾಕು ಉತ್ಪನ್ನಗಳಾದ ಬೀಡಿ, ಸಿಗರೇಟ್, ಗುಟ್ಕಾ, ಹನ್ಸ್, ಕಡ್ಡಿಪುಡಿ ಇತರೆ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುತ್ತಿದೆ. ಶೇ೭೧ ಶ್ವಾಸಕೋಶದ ಕ್ಯಾನ್ಸರ್ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುತ್ತಿದೆ. ಆಧುನಿಕ ದಿನಗಳಲ್ಲಿ ಅಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿದ್ದು, ಇಂತಹ ರೋಗಗಳಿಗೆ ತಂಬಾಕು ಉತ್ಪನ್ನಗಳ ಸೇವನೆ ಪ್ರಮುಖ ಕಾರಣವಾಗಿದೆ, ಹದಿಹರೆಯದ ವಯಸ್ಸಿನ ಯುವಕರು/ವಿದ್ಯಾರ್ಥಿಗಳು ಜಾಗೃತರಾಗುವಂತೆ ತಿಳಿಸಿದರು. ಸಭೆಯಲ್ಲಿ ಡಿಹೆಚ್‌ಓ ಡಾ.ಶ್ರೀನಿವಾಸ್.ಜಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಚಾರಿಣಿ ಎಂ.ಎ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ರವಿ ಕುಮಾರ್ ಎಂ.ವಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಪ್ರಸನ್ನ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾರಾಯಣ ಸ್ವಾಮಿ, ಡಾ.ರಮೇಶ್ ಬಾಬು, ಡಾ.ಸುನೀಲ್, ಡಾ.ಸುಗುಣ, ಜಿಪಂ ಕಾರ್ಯದರ್ಶಿ ವೆಂಕಟಾ ಚಲಪತಿಎಸ್, ಕೆ.ಎಸ್.ಆರ್.ಟಿ.ಸಿ ಆಡಳಿತಾಧಿಕಾರಿ ಭಾಗ್ಯಲಕ್ಷ್ಮೀ ಎಂ.ವಿ, ಜಿಲ್ಲಾ ತಂಬಾಕು ನಿಯಂತ್ರಣಕೋಶದ ಜಿಲ್ಲಾ ಸಲಹೆಗಾರ ಮಹಮದ್.ಪಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ