ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಸೋಮವಾರ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಾರ್ವಜನಿಕರ ಸಲಹೆ, ಸಹಕಾರದಿಂದ ಅಭಿವೃದ್ಧಿ ಕಾರ್ಯಗಳು ಜರುಗುತ್ತಿವೆ. ಮುಂದಿನ ದಿನಗಳಲ್ಲಿ ನಿಗಮ ಮಂಡಳಿಯಿಂದ ಸಾಮಾಜಿಕ ಹಾಗೂ ಸಮಾಜಮುಖಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತೇನೆ. ಯಾವುದೇ ಕ್ಷೇತ್ರಗಳು ಅಭಿವೃದ್ಧಿಯಾಗಲು ಸಾರ್ವಜನಿಕರ ಸಹಕಾರ ಅತ್ಯಮೂಲ್ಯ ಎಂದು ತಿಳಿಸಿದರು.
ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ ಮಾತನಾಡಿ, ಬಿ.ಕೆ. ಸಂಗಮೇಶ್ವರ ಅವರು ನಮ್ಮ ಜಿಲ್ಲೆಯ ಒಂದು ಶಕ್ತಿ. ಅವರಿಗೆ ಇನ್ನೂ ಉನ್ನತ ಸ್ಥಾನವಾದ ಮಂತ್ರಿ ಪದವಿ ಸಿಗಬೇಕಾಗಿತ್ತು. ಮುಂಬರುವ ದಿನಗಳಲ್ಲಿ ಮಂತ್ರಿಯಾಗಿ ಇನ್ನು ಹೆಚ್ಚಿನ ಸೇವೆ ಸಲ್ಲಿಸಲು ನಮ್ಮ ಸಮಾಜದವರು ಅವರ ಅಭಿವೃದ್ಧಿಯಲ್ಲಿ ಸದಾ ಕೈ ಜೋಡಿಸುತ್ತೇವೆ ಎಂದು ಹೇಳಿದರು.ಸಂಘದ ಜಿಲ್ಲಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಸಂಗಮೇಶ್ವರ ಅವರು ಕ್ಷೇತ್ರ ಅಭಿವೃದ್ಧಿ, ಜನರ ಪ್ರೀತಿ- ವಿಶ್ವಾಸ ಹಾಗೂ ಸಾಧನೆಯಿಂದ ಉನ್ನತ ಸ್ಥಾನ ಲಭಿಸಿದೆ ಎಂದರು.
- - - -5ಎಸ್ಎಂಜಿಕೆಪಿ07:
ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೋಮವಾರ ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರನ್ನು ಸನ್ಮಾನಿಸಲಾಯಿತು.