ಕನ್ನಡಪ್ರಭ ವಾರ್ತೆ ಚನ್ನಪಟ್ಟಣ
ತಾಲೂಕಿನ ಹುಣಸನಹಳ್ಳಿ ಗ್ರಾಮದ ಶ್ರೀ ಬಿಸಿಲಮ್ಮ ದೇವಸ್ಥಾನ ಆವರಣದಲ್ಲಿ ಆಯೋಜಿಸಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಸಹ ಅಗತ್ಯ ಎಂದರು.
ನಿಮ್ಮ ಸುತ್ತಲಿನ ಪರಿಸರದಲ್ಲಿ ಗಾಂಜಾ ಬೆಳೆಯುವವರಾಗಲಿ, ಮಾರಾಟ ಮಾಡುವುದಾಗಲಿ, ವಿಧ್ವಂಸಕ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡು ಬಂದರೆ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಿಕೊಂಡರು.ನಾಗರಿಕ ಸಮಾಜದಲ್ಲಿ ಬದುಕುತ್ತಿರುವ ನಾವು ನಮ್ಮ ಮನೆಯ ವಿಚಾರಕ್ಕೆ ಮಾತ್ರ ಸೀಮೀತರಾಗಿರದೇ, ಅಕ್ಕಪಕ್ಕ ಏನೇನು ನಡೆಯುತ್ತದೆ, ಇದರಿಂದ ಸಮಾಜಕ್ಕೆ ತೊಂದರೆ ಉಂಟಾಗುತ್ತಿದೆಯೇ ಎಂದು ಒಮ್ಮೆ ಯೋಚಿಸಿದರೆ ಪೊಲೀಸರ ಅರ್ಧ ಕೆಲಸ ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ನಮ್ಮೊಡನೆ ಸಹಕರಿಸುವಂತೆ ಮನವಿ ಮಾಡಿಕೊಂಡರು.
ಸಭೆಯಲ್ಲಿ ಅಕ್ಕೂರು ಪೊಲೀಸ್ ಠಾಣೆಯ ಪಿಎಸ್ಯ ಬಸವರಾಜು, ನಂದೀಶ್, ನಾಗರಾಜು ಸೇರಿದಂತೆ ಹಲವರು ಇದ್ದರು.
ಪೋಟೊ೨೨ಸಿಪಿಟಿ೧: ತಾಲೂಕಿನ ಹುಣಸನಹಳ್ಳಿ ಗ್ರಾಮದ ಬಿಸಿಲಮ್ಮ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷ ಕೃಷ್ಣ ಮಾತನಾಡಿದರು.